Mangalore Crime : ಹಾಡಹಗಲೇ ಮಂಗಳೂರಿನಲ್ಲಿ ಮತ್ತೆ ಹರಿಯಿತು ನೆತ್ತರು!

ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. 

Written by - Zee Kannada News Desk | Last Updated : Aug 20, 2022, 04:40 PM IST
  • ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ
  • ಮಂಗಳೂರಿನ ಹೊರವಲಯದ ವಳಚ್ಚಿಲ್ ಎಂಬಲ್ಲಿ
  • ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ
Mangalore Crime : ಹಾಡಹಗಲೇ ಮಂಗಳೂರಿನಲ್ಲಿ ಮತ್ತೆ ಹರಿಯಿತು ನೆತ್ತರು! title=

ಮಂಗಳೂರು : ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. 

ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್ ಎಂಬ ಬಾಲಕನನ್ನು ತಡೆದಿದ್ದ ಗ್ಯಾಂಗ್ ವೊಂದು ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಲು ಯತ್ನಿಸುತ್ತಿದ್ದ ಸಂದರ್ಭ ತಡೆಯಲು ಬಂದ ಯುವಕನ ಮಾವ ಆಸೀಫ್ ಎಂಬುವವರ ಮೇಲೆ ತಂಡ ಏಕಾಏಕಿ ತಲವಾರು ಹಾಗೂ ಇನ್ನಿತರ ಮಾರಕಾಸ್ರ್ತಗಳಿಂದ ದಾಳಿ ನಡೆಸಿದೆ. 

ಇದನ್ನೂ ಓದಿ : ಅಥಣಿಯಲ್ಲಿ ಭೀಕರ ಅಪಘಾತ ಪ್ರಕರಣ : ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಭೇಟಿ

ಈ ಘಟನೆಯಲ್ಲಿ ಆಸೀಫ್ ಗಂಭೀರ ಗಾಯಗೊಂಡಿದ್ದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ದಾಖಲಾಗಿದ್ದಾರೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಿಸ್ತಾ, ಮನ್ಸೂರು ಯಾನೆ ಹುಸೈನ್ ಹಾಗೂ ಆಶಿಕ್ ಪ್ರಮುಖ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿ ಆಶಿಕ್ ಎಂಬವನನ್ನು ಬಂಧಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News