ಮಂಗಳೂರು : ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಹರ್ಷಿತ್ (28) ಎಂದು ಗುರುತಿಸಲಾಗಿದೆ.  ಈತ ಆರೋಪಿಗಳು ಕೃತ್ಯ ನಡೆಸಿದ ಬಳಿಕ ಅವರನ್ನು ಇನ್ನೊಂದು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ‌ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಕರೆದುಕೊಂಡು ಹೋಗಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಜುಲೈ 28ರಂದು ರಾತ್ರಿ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ರನ್ನು ದುಷ್ಕರ್ಮಿಗಳು ತಲ್ವಾರ್ ಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ 6  ಮಂದಿ ಹಾಗೂ ಕೃತ್ಯ ನಡೆಸಲು ಕಾರು ನೀಡಿದ್ದ ಓರ್ವ ಸೇರಿ ಒಟ್ಟು ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಷಿತ್ ಬಂಧನದೊಂದಿಗೆ ಪ್ರಕರಣದಲ್ಲಿ ಒಟ್ಟು 8 ಮಂದಿ ಬಂಧನಕ್ಕೊಳಗಾದಂತಾಗಿದೆ.


ಇದನ್ನೂ ಓದಿ : KG Halli : ಕೆಜಿ ಹಳ್ಳಿ ಕಾಲೇಜು ವಿದ್ಯಾರ್ಥಿ ಕೊಲೆ ಕೇಸ್ : ಹತ್ಯಗೆ ಬಳಸಿದ ವೆಪನ್‌ ನೋಡಿ ಪೊಲೀಸರೆ ಶಾಕ್‌!  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.