ಮಂಡ್ಯ : ಸಕ್ಕರೆನಾಡಿನಲ್ಲಿ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಮಹಿಳೆಯ ಬರ್ಬರ ಕೊಲೆಗೆ ಇಲ್ಲಿನ ಜನ ಬೆಚ್ಚಿ ಬಿದ್ದಿದ್ದಾರೆ. 


COMMERCIAL BREAK
SCROLL TO CONTINUE READING

ಕಿಕ್ಕೇರಿ ಪಟ್ಟಣದ ಪುಷ್ಪಲತಾ(45) ಬರ್ಬರವಾಗಿ ಕೊಲೆಯಾದ ಮಹಿಳೆ. ಈ ಮಹಿಳೆ ಪಟ್ಟಣದಲ್ಲಿ ಮೆಡಿಕಲ್ ಸ್ಟೋರ್ ಇಟ್ಟುಕೊಂಡು ಜೀವನ ನಡೆಸ್ತಿದ್ದರು. ದುಷ್ಕರ್ಮಿ ಮಹಿಳೆಯನ್ನು ಮನೆಯಲ್ಲಿದ್ದ ವೇಳೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. 


ಇದನ್ನೂ ಓದಿ : ನಿಮಾನ್ಸ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ! ಈ ಸಾವು ನ್ಯಾಯವೇ?


ಈಗ ಘಟನಾ ಸ್ಥಳಕ್ಕೆ ಎಸ್ಪಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಆರೋಪಿ ಪತ್ತೆಗಾಗಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.