Mandya : ಸಕ್ಕರೆನಾಡು ಮಂಡ್ಯದಲ್ಲಿ ಬೆಳಕಿಗೆ ಬಂದ ಮತ್ತೊಂದು ಪೈಶಾಚಿಕ ಕೃತ್ಯ..!

ಮಳವಳ್ಳಿ ತಾಲೂಕಿನ‌ ಬ್ಯಾಡರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮದ ವೃದ್ದನೊಬ್ಬ ಈ ಕೃತ್ಯ ವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.

Written by - Zee Kannada News Desk | Last Updated : Oct 16, 2022, 09:15 AM IST
  • ಮಳವಳ್ಳಿಯ ಅಪ್ರಾಪ್ತ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ
  • ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ
  • ಮಳವಳ್ಳಿ ತಾಲೂಕಿನ‌ ಬ್ಯಾಡರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮದಲ್ಲಿ ಘಟನೆ
Mandya : ಸಕ್ಕರೆನಾಡು ಮಂಡ್ಯದಲ್ಲಿ ಬೆಳಕಿಗೆ ಬಂದ ಮತ್ತೊಂದು ಪೈಶಾಚಿಕ ಕೃತ್ಯ..! title=

ಮಂಡ್ಯ : ಜಿಲ್ಲೆಯ ಮಳವಳ್ಳಿಯ ಅಪ್ರಾಪ್ತ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ 65 ವರ್ಷದ ವೃದ್ದನಿಂದ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ಥೆ ಬಾಲಕಿಯ ಸಹೋದರಿ ಹಲಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಳವಳ್ಳಿ ತಾಲೂಕಿನ‌ ಬ್ಯಾಡರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮದ ವೃದ್ದನೊಬ್ಬ ಈ ಕೃತ್ಯ ವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಬಾಲಕಿಗೆ ತಿಂಡಿ ಊಟ ಕೊಡಿಸುವುದಾಗಿ ಪುಲಾಯಿಸಿ ಬಸವನಹಳ್ಳಿ ಬೆಟ್ಟಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸಂತ್ರಸ್ತೆ ಬಾಲಕಿಯ ಸಹೋದರಿ ದೂರಿನ ಮೇರೆಗೆ ಆರೋಪಿ ವೃದ್ದನನ್ನ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹಲಗೂರು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.  

ಇದನ್ನೂ ಓದಿ : ಎಲ್.ಜಿ ಕಂಪನಿಯಿಂದ ಟಿ.ವಿ. ಖರೀದಿಸಿ ಮೋಸ ಹೋದ ವ್ಯಕ್ತಿಗೆ ನ್ಯಾಯ ಕೊಡಿಸಿದ ಗ್ರಾಹಕರ ಆಯೋಗ

ಇತ್ತೀಚಿಗೆ ಮಳವಳ್ಳಿಯಲ್ಲಿ ಟ್ಯೂಷನ್‌ ಸೆಂಟರ್‌ನಲ್ಲಿ ಮೇಲ್ವಿಚಾರಕನಾಗಿದ್ದ ಆರೋಪಿ 52 ವರ್ಷದ ಕಾಂತರಾಜು ಪುಟ್ಟಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ, ಇದು ಮಾಸುವ ಮುನ್ನ ಮತ್ತೊಂದು ಘಟನೆ ನಡೆದಿರುವುದು ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ.

ಇದನ್ನೂ ಓದಿ : ಜಗಳ ಬಿಡಿಸಲು ಹೋದವನಿಗೆ ಚಾಕು ಇರಿತ: ಆತನ ವಿರುದ್ಧವೇ ದಾಖಲಾಯ್ತು ಎಫ್ಐಆರ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News