ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಆರೋಪಿಸಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, “ಐಸಿಸ್‌ ನಿಂದ ಹತ್ಯೆಯಾಗಿದೆ ಅಂತಾ ಸಿದ್ದು ಸವದಿ‌ ಹೇಳಿದ್ದಾರೆ. ನಿಮ್ಮ ಬಳಿ ಮಾಹಿತಿ ಇದ್ದರೆ ತನಿಖಾ ಏಜೆನ್ಸಿಗಳಿಗೆ ಕೊಡಿ” ಎಂದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಡೈ, ಹೇರ್ ಪ್ಯಾಕ್ ಅಗತ್ಯವೇ ಇಲ್ಲ… ಈ ತರಕಾರಿಗಳನ್ನು ತಿಂದ್ರೆ ಸಾಕು ಬುಡದಿಂದಲೇ ಕಪ್ಪಾಗುತ್ತೆ ಬಿಳಿಕೂದಲು!


“ಬಿಜೆಪಿಯವರು ರಾಜಕೀಯವಾಗಿ  ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡ್ತಿದಾರೆ. ಬಜೆಟ್ ಮಂಡನೆಯಾಗಿದೆ. ಸದನ ನಡೆಯುತ್ತಿದೆ. ಆದ್ರೆ ನಿಮ್ಮ ವಿರೋಧ ಪಕ್ಷದ ನಾಯಕ ಎಲ್ಲಿದ್ದಾರೆ? ಎಂದು ಪ್ರಶ್ನೆ ಮಾಡಿದ ಅವರು ಬಿಜೆಪಿಯವರು ಸದನಕ್ಕೆ ಕಪ್ಪು ‌ಚುಕ್ಕಿ‌ ಇಡ್ತಿದಾರೆ” ಎಂದರು.


ಜೈನ ಮುನಿ ಹತ್ಯೆ ಸಿಬಿಐಗೆ ವಹಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ರಾಜ್ಯ ಪೊಲೀಸ್ ಇಲಾಖೆಯಲ್ಲಿ ತನಿಖಾ ಸಾಮರ್ಥ್ಯ ಇಲ್ಲ ಅಂದುಕೊಂಡಿದ್ದೀರಾ.? ಮೊದಲು ನಿಮ್ಮ ಬಳಿ ಇರುವ ಮಾಹಿತಿ ಕೊಡಿ. ರಾಜ್ಯ ಪೊಲೀಸ್ ಇಲಾಖೆ ಸಮರ್ಥವಾಗಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


ಇನ್ನೂ ಜೈನ ಮುನಿಗಳ ಹತ್ಯೆ ಬಗ್ಗೆ ಬಿಜೆಪಿ ಶಾಸಕ ಸಿದ್ದು ಸವದಿ ಜೈನ ಮುನಿಗಳನ್ನ ಚಿತ್ರಹಿಂಸೆ ಮಾಡಿ ಕರೆಂಟ್ ಶಾಕ್ ಕೊಟ್ಡು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ. ಇನ್ನು ಭಯಾನಕ ಘಟನೆ ಭವಿಷ್ಯದಲ್ಲಿ ಕಾಣುವ ಆತಂಕ ಇದೆ. ಇದರ ಹಿಂದೆ ಐಸಿಸ್ ಉಗ್ರರ ಚಿತಾವಣೆ ಇದೆ. ಆದರೆ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ ಎಂದು ಹೇಳಿದ್ದರು.


ಇದನ್ನೂ ಓದಿ: ವಿಧಾನಸಭೆಗೆ ಅನಾಮಿಕನ ಪ್ರವೇಶ -ದ್ವಿಗುಣ ಭದ್ರತೆ: ಸ್ಪೀಕರ್ ಖಾದರ್ ಪರಿಶೀಲನೆ


ಸರ್ವ ಸಂಗತ್ಯಾಗ ಮಾಡಿದ ಮುನಿಗಳ ಹತ್ಯೆಯ ಹಿಂದೆ ಪಿತೂರಿ ಇದೆ. ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಬೇಕು ಆಗ ಸಂಪೂರ್ಣ ಸತ್ಯ ಹೊರ ಬರುತ್ತದೆ. ಸ್ವಾಮಿಗಳು ಆರ್ಥಿಕ ವ್ಯವಹಾರ ಮಾಡಿರುವ ಸಾಧ್ಯತೆ ಇಲ್ಲ. ಭಕ್ತರು ಆರ್ಥಿಕ ವ್ಯವಹಾರ ಮಾಡಿರಬಹುದು. ಇದರ ಹಿಂದೆ ಪಿತೂರಿ ಇದೆ. ಸಂಸ್ಕಾರ ಕೊಡುವ ಮುನಿಗಳು ಆರ್ಥಿಕ ವ್ಯವಹಾರ ಮಾಡುವ ಸಾಧ್ಯವಿಲ್ಲ. ಎಲ್ಲಾ ಮುನಿಗಳಿಗೆ ರಕ್ಷಣೆ ನೀಡಬೇಕು. ಇನ್ನು ಸರ್ಕಾರ ಮುಚ್ಚಿಡುವ ಯತ್ನ ಮಾಡುತ್ತಿದೆ ಎಂದು ಆರೋಪ ಮಾಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ