ಕುತ್ತಿಗೆಗೆ ಚಾಕು ಇರಿದು ಮಹಿಳೆಯ ಕೊಲೆ: ಆರೋಪಿ ಪರಾರಿ, ಪೊಲೀಸರಿಂದ ಪ್ರಕರಣ ದಾಖಲು

Crime News: ಕಳೆದ ಬುಧವಾರ ಮುಂಜಾನೆ, ದೀಪ ಕುತ್ತಿಗೆಗೆ ಚಾಕುವಿನಿಂದ ತಿವಿದು, ಕೊಲೆಯೆಸಗಿ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇದೀಗ ಘಟನೆ ನಡೆದು ನಾಲ್ಕು ದಿನ ಕಳೆದಿದ್ದು, ಮನೆಯಿಂದ ದುರ್ವಾಸನೆ ಬರತೊಡಗಿದೆ. ಅನುಮಾನಗೊಂಡ ಸ್ಥಳೀಯರು, ಸಂಜೆ ವೇಳೆ ಮನೆಯ ಬಾಗಿಲಿನ ಬೀಗದ ಕಿಂಡಿಯಿಂದ ಇಣುಕಿ ನೋಡಿದಾಗ ಮಹಿಳೆಯ ಶವ  ಪತ್ತೆಯಾಗಿದೆ.

Written by - Bhavishya Shetty | Last Updated : Feb 11, 2024, 12:43 PM IST
    • ಮಹಿಳೆಯ ಕೊಲೆಗೈದು ವ್ಯಕ್ತಿಯೋರ್ವ ಪರಾರಿಯಾಗಿರುವ ಘಟನೆ
    • ಜೋಸೆಫ್ ಕಾನ್ವೆಂಟ್ ಮುಂಭಾಗದ ರಸ್ತೆಯ ಚಾಮರಾಜಪೇಟೆಯಲ್ಲಿ ಘಟನೆ
    • ಚಾಮರಾಜಪೇಟೆಯಲ್ಲಿ ಬಾಡಿಗೆಗೆ ಮನೆ ಪಡೆದು ಇಬ್ಬರೂ ಒಟ್ಟಿಗೆ ವಾಸಿದುತ್ತಿದ್ದರು
ಕುತ್ತಿಗೆಗೆ ಚಾಕು ಇರಿದು ಮಹಿಳೆಯ ಕೊಲೆ: ಆರೋಪಿ ಪರಾರಿ, ಪೊಲೀಸರಿಂದ ಪ್ರಕರಣ ದಾಖಲು title=
Crime News

Crime News: ಮಹಿಳೆಯ ಕೊಲೆಗೈದು ವ್ಯಕ್ತಿಯೋರ್ವ ಪರಾರಿಯಾಗಿರುವ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೇಂಟ್ ಜೋಸೆಫ್ ಕಾನ್ವೆಂಟ್ ಮುಂಭಾಗದ ರಸ್ತೆಯ ಚಾಮರಾಜಪೇಟೆಯಲ್ಲಿ ನಡೆದಿದೆ.

ದೀಪ (40 ವರ್ಷ) ಹತ್ಯೆಯಾದ ಮಹಿಳೆ. ಭಾನುವಾರ ಬೆಳಗ್ಗೆ ಕೊಲೆ ಸಂಬಂಧ ಪೊಲೀಸರು ಮಾಹಿತಿ ಪಡೆದಿದ್ದು, ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.  

ಇದನ್ನು ಓದಿ: ಟೆಸ್ಟ್ ತಂಡದಲ್ಲಿ ಸ್ಥಾನ ಸಿಕ್ಕರೂ ಭಾರತದ 3 ಆಟಗಾರರಿಗೆ ಪ್ಲೇಯಿಂಗ್ 11ನಲ್ಲಿ ಇಲ್ಲ ಅವಕಾಶ!

ದೀಪ ಮತ್ತು ಆಕೆಯ ಜೊತೆ ಸಂಬಂಧವಿಟ್ಟುಕೊಂಡಿದ್ದ ಆಂಧ್ರ ಮೂಲದ ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ ಅಲಿಯಾಸ್ ದಿವಾಕರ್ ಎಂಬಾತ, ಚಾಮರಾಜಪೇಟೆಯಲ್ಲಿ ಬಾಡಿಗೆಗೆ ಮನೆ ಪಡೆದು ಇಬ್ಬರೂ ಒಟ್ಟಿಗೆ ವಾಸಿದುತ್ತಿದ್ದರು  ಎಂದು ಮನೆ ಮಾಲೀಕರು ಪೊಲೀಸರಿಗೆ ನೀಡಿದ್ದಾರೆ.

ಕಳೆದ ಬುಧವಾರ ಮುಂಜಾನೆ, ದೀಪ ಕುತ್ತಿಗೆಗೆ ಚಾಕುವಿನಿಂದ ತಿವಿದು, ಕೊಲೆಯೆಸಗಿ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇದೀಗ ಘಟನೆ ನಡೆದು ನಾಲ್ಕು ದಿನ ಕಳೆದಿದ್ದು, ಮನೆಯಿಂದ ದುರ್ವಾಸನೆ ಬರತೊಡಗಿದೆ. ಅನುಮಾನಗೊಂಡ ಸ್ಥಳೀಯರು, ಸಂಜೆ ವೇಳೆ ಮನೆಯ ಬಾಗಿಲಿನ ಬೀಗದ ಕಿಂಡಿಯಿಂದ ಇಣುಕಿ ನೋಡಿದಾಗ ಮಹಿಳೆಯ ಶವ  ಪತ್ತೆಯಾಗಿದೆ.

ಇದನ್ನು ಓದಿ: Virat Kohli: 13 ವರ್ಷಗಳ ‘ಪ್ರೀತಿಯ ಜೀವನ’ದಲ್ಲಿ ವಿರಾಟ್’ಗೆ ಈ ರೀತಿ ಆಗಿದ್ದು ಇದೇ ಮೊದಲು! ಅಂತಹದ್ದೇನಾಯ್ತು?

 ಕೂಡಲೇ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಚ್ ನಂಜುಂಡಯ್ಯ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಮೃತಳ ಶವವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು ಮೃತಳ ಕಡೆಯವರು ನೀಡಿದ ದೂರಿನ ಮೇರೆಗೆ ಪ್ರಕರಣ  ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News