ಮೈಸೂರು: ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಗೋಳೂರು ಗ್ರಾಮದ ಮಹದೇವು ಎಂಬುವವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 17 ವರ್ಷದ ರೇಣುಕಾ ಮೃತ ದುರ್ದೈವಿ. ಈಕೆ ನಂಜನಗೂಡಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.


ಇದನ್ನೂ ಓದಿ: ಅಡ್ಜಸ್ಟ್‌ಮೆಂಟ್‌ ರಾಜಕಾರಣಿ, ಛದ್ಮವೇಷಧಾರಿ, ಡೋಂಗಿ ಸಮಾಜವಾದಿ: ಸಿದ್ದು ವಿರುದ್ಧ ಎಚ್‍ಡಿಕೆ ವಾಗ್ದಾಳಿ


ಆಗಾಗ್ಗೆ ರೇಣುಕಾಳಿಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ.


ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ, ಪಿಎಸ್ಐ ರಾಮಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಈ ಸರ್ಕಾರ ಆಡಳಿತ ನಡೆಸುವ ವಿಶ್ವಾಸ ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.