ನವದೆಹಲಿ: ಜಂಕ್‌ಫುಡ್ ತಿನ್ನಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಾರಾಷ್ಟ್ರದ ನಾಗಪುರದಲ್ಲಿ ಬ್ಯಾಚುಲರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (BBA) ಓದುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


COMMERCIAL BREAK
SCROLL TO CONTINUE READING

ನಾಗಪುರದ ಸಿಂಧಿ ಕಾಲೋನಿ ನಿವಾಸಿ ಭೂಮಿಕಾ ವಿನೋದ್ ಧನ್ವಾನಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆಗೆ ಜಂಕ್‌ಫುಡ್‌ ತಿನ್ನಬೇಡ ಅಂತಾ ಅವರ ತಂದೆ ಬೈದು ಬುದ್ದಿವಾದ ಹೇಳಿದ್ದರಂತೆ. 


ಇದನ್ನೂ ಓದಿ: ದೆಹಲಿಯ ಕಬೀರ್ ನಗರದಲ್ಲಿ ಕಟ್ಟಡ ಕುಸಿತ: ಇಬ್ಬರು ಮೃತ, ಓರ್ವನಿಗೆ ಗಾಯ


ಭೂಮಿಕಾಗೆ ಥೈರಾಯ್ಡ್ ಸಮಸ್ಯೆ ಇದ್ದ ಕಾರಣ ಆಕೆಯ ತಂದೆ ಜಂಕ್‌ಫುಡ್ ತಿನ್ನಬೇಡ ಎಂದಿದ್ದಂತೆ. ಆದರೆ ತಂದೆಯ ಮಾತು ಕೇಳದ ಆಕೆ ಜಂಕ್‌ಫುಡ್‌ ಸೇವಿಸಿದ್ದಳಂತೆ. ಈ ಬಗ್ಗೆ ಆಕೆಗೆ ಗದರಿಸಿ ಬೈದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಬೇಸರಗೊಂಡ ಆಕೆ ಅಡುಗೆ ಕೋಣೆಯಲ್ಲಿ ಉದ್ದನೆಯ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರತಾಪ್ ನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.


ಗುರುವಾರ ಬೆಳಗ್ಗೆ ಭೂಮಿಕಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಆಕೆಯ ಕುಟುಂಬ ಸದಸ್ಯರು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಕೆ ಈಗಾಗಲೇ ಸಾವನ್ನಪ್ಪಿದ್ದಾಳೆ ಅಂತಾ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. 


ಇದನ್ನೂ ಓದಿ: ಬಿಎ ಓದುವ ವಿಚಾರದಲ್ಲಿ ಗಂಡನೊಂದಿಗೆ ಜಗಳ; ನೇಣಿಗೆ ಶರಣಾದ ಗರ್ಭಿಣಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ