"ಅಬ್‌ ತೇರಿ ಬಾರಿ ಹೈ.." ಉದಯಪುರ ಹತ್ಯೆ ಬೆನ್ನಲ್ಲೇ ನವೀನ್‌ ಜಿಂದಾಲ್‌ಗೆ ಕೊಲೆ ಬೆದರಿಕೆ

Naveen Jindal: ಬಿಜೆಪಿಯ ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಅವರಿಗೆ ಬುಧವಾರ ಮುಂಜಾನೆ ಕೊಲೆ ಬೆದರಿಕೆಯ ಇ-ಮೇಲ್ ಬಂದಿದೆ. ವಿಡಿಯೋವನ್ನು ಶೇರ್ ಮಾಡಿದ ನವೀನ್, "ಯಾರೋ ನನಗೆ ಜೀವ ಬೆದರಿಕೆ ಹಾಕಿದರು ಮತ್ತು 'ಈಗ ನಿಮ್ಮ ಸರದಿ" ಎಂದು ಮೇಲ್‌ನಲ್ಲಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. 

Written by - Chetana Devarmani | Last Updated : Jun 29, 2022, 04:48 PM IST
  • ಉದಯಪುರ ಹತ್ಯೆ ಬೆನ್ನಲ್ಲೇ ನವೀನ್‌ ಜಿಂದಾಲ್‌ಗೆ ಕೊಲೆ ಬೆದರಿಕೆ
  • ಉಚ್ಛಾಟಿತ ಬಿಜೆಪಿ ನಾಯಕ ನವೀನ್ ಜಿಂದಾಲ್
  • ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್
"ಅಬ್‌ ತೇರಿ ಬಾರಿ ಹೈ.." ಉದಯಪುರ ಹತ್ಯೆ ಬೆನ್ನಲ್ಲೇ ನವೀನ್‌ ಜಿಂದಾಲ್‌ಗೆ ಕೊಲೆ ಬೆದರಿಕೆ  title=
ನವೀನ್‌ ಜಿಂದಾಲ್‌

ನವದೆಹಲಿ: ಬಿಜೆಪಿ ನಾಯಕ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಇಬ್ಬರು ಯುವಕರು ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಶಿರಚ್ಛೇದನ  ಮಾಡಿದ್ದಾರೆ. ಏತನ್ಮಧ್ಯೆ, ಉಚ್ಛಾಟಿತ ಬಿಜೆಪಿ ನಾಯಕ ನವೀನ್ ಜಿಂದಾಲ್ ಅವರಿಗೆ ಬುಧವಾರ ಮುಂಜಾನೆ ಕೊಲೆ ಬೆದರಿಕೆಯ ಇ-ಮೇಲ್ ಬಂದಿದೆ. ವಿಡಿಯೋವನ್ನು ಶೇರ್ ಮಾಡಿದ ನವೀನ್, "ಯಾರೋ ನನಗೆ ಜೀವ ಬೆದರಿಕೆ ಹಾಕಿದರು ಮತ್ತು 'ಈಗ ನಿಮ್ಮ ಸರದಿ" ಎಂದು ಮೇಲ್‌ನಲ್ಲಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ: Udaipur Murder : ಕನ್ಹಯ್ಯಾ ಲಾಲ್ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ!

ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ನವೀನ್ ಜಿಂದಾಲ್, ಬುಧವಾರ ಬೆಳಗ್ಗೆ ಮೂರು ಮೇಲ್‌ಗಳು ಬಂದಿವೆ ಎಂದು ಹೇಳಿದ್ದಾರೆ. ಬರ್ಬರ ಹತ್ಯೆಯ ವಿಡಿಯೋ ಕೂಡ ಕಳುಹಿಸಲಾಗಿದೆ. ಅದೇ ಪರಿಸ್ಥಿತಿ ನವೀನ್ ಮತ್ತು ಅವರ ಕುಟುಂಬಕ್ಕೂ ಬರಲಿದೆ ಎಂದು ಹೇಳಲಾಗಿದೆ ಎಂದು ತಿಳಿಸಿದ್ದಾರೆ. ಪ್ರಾಸಂಗಿಕವಾಗಿ, ಪ್ರವಾದಿಯ ವಿವಾದದಲ್ಲಿ ನವೀನ್ ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದವು. 

ಏತನ್ಮಧ್ಯೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಉದಯಪುರದಲ್ಲಿ ನಡೆದ ಕ್ರೂರ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಉದಯಪುರದಲ್ಲಿ ನಡೆದ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕಾನೂನು ಯಾರನ್ನೂ ಹತ್ಯೆ ಮಾಡಲು ಅವಕಾಶ ನೀಡುವುದಿಲ್ಲ. ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ. ಅದು ಅಪರಾಧ. ಈ ಬಗ್ಗೆ ಆಡಳಿತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ತಮ್ಮ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೂಪುರ್ ಶರ್ಮಾಗೆ ಬೆಂಬಲ: ರಾಜಸ್ಥಾನದಲ್ಲಿ ವ್ಯಕ್ತಿಯ ಶಿರಚ್ಛೇದ, ಪ್ರಧಾನಿ ಮೋದಿಗೂ ಬೆದರಿಕೆ..!

ಮಂಗಳವಾರ ಮಧ್ಯಾಹ್ನ 2.30 ರ ಸುಮಾರಿಗೆ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಖ್ತರ್ ಮತ್ತು ಮೊಹಮ್ಮದ್ ಗೋಶ್ ಅವರು ಧನ್ಮಂಡಿ ಪ್ರದೇಶದ ಟೈಲರ್ ಅಂಗಡಿಗೆ ಪ್ರವೇಶಿಸಿದ್ದಾರೆ. ಅವರು ಆರಂಭದಲ್ಲಿ ಮೃತ ಟೈಲರ್‌ಗೆ ಶರ್ಟ್‌ ಹೊಲೆಯಲು ಅಳತೆ ನೀಡಿದರು. ನಂತರ ಹರಿತವಾದ ಆಯುಧದಿಂದ ವ್ಯಕ್ತಿಯ ತಲೆ ಮತ್ತು ಕುತ್ತಿಗೆಗೆ ಹೊಡೆದಿದ್ದಾರೆ. ಹಂತಕರು ಘಟನೆಯ ವಿಡಿಯೋಗಳನ್ನೂ ರೆಕಾರ್ಡ್ ಮಾಡಿದ್ದಾರೆ. ನಂತರ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿತ್ತು. ಆರೋಪಿಗಳು ವಿಡಿಯೋದಲ್ಲಿ ಹಲವು ವಿಷಯಗಳ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಸಹ ಕೊಲೆ ಬೆದರಿಕೆ ಹಾಕಲಾಗಿದೆ. ಇಬ್ಬರು ಹಂತಕರು ನೂಪುರ್ ಶರ್ಮಾ ತಲೆ ಬೋಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನೂಪುರ್ ಶರ್ಮಾ ಹೇಳಿಕೆಯನ್ನು ಬೆಂಬಲಿಸಿ ಮೃತ ಕನ್ಹಯ್ಯಾ ಲಾಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News