ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ಹತ್ಯೆ ಮಾಡಲಾಗಿದೆ. ತಮಿಳುನಾಡಿನ ಕೃಷ್ಣಗಿರಿ ಸಮೀಪ ಸುರೇಶ್ ಬಾಬು ಅಲಿಯಾಸ್ ಅಲ್ಯೂಮಿನಿಯಂ ಬಾಬುವನ್ನು ಕೊಲೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಬೆಂಗಳೂರಿನ ಜಯನಗರ ಪೊಲೀಸ್ ಠಾಣೆ ರೌಡಿಶೀಟರ್ ಆಗಿದ್ದ ಅಲ್ಯೂಮಿನಿಯಂ ಬಾಬುವನ್ನು ಶನಿವಾರ ರಾತ್ರಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.


ಇದನ್ನೂ ಓದಿ: Boy Killed Crocodile: ನೀರು ತರಲು ಹೋದ ಬಾಲಕನ ಮೇಲೆ ಮೊಸಳೆ ದಾಳಿ -ಮೃತದೇಹಕ್ಕಾಗಿ ಹುಡುಕಾಟ!


ಬೆಂಗಳೂರು ದಕ್ಷಿಣ ವಿಭಾಗದ ನಟೋರಿಯಸ್ ರೌಡಿಯಾಗಿದ್ದ ಅಲ್ಯೂಮಿನಿಯಂ ಬಾಬು ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕೊಲೆ, ಸುಲಿಗೆ, ಬೆದರಿಕೆ ಮತ್ತು ದರೋಡೆಯಂತ ಪ್ರಕರಣಗಳಲ್ಲಿ ಬಾಬು ಭಾಗಿಯಾಗಿದ್ದ. ಇತ್ತೀಚಿಗೆ ತಮಿಳುನಾಡು ಕಡೆ ವಾಸ್ತವ್ಯ ಬದಲಿಸಿದ್ದ ಆತನನ್ನು ಮರ್ಡರ್ ಮಾಡಲಾಗಿದೆ.


ತಿಲಕ್ ನಗರ ಜಲ್ಲಿ ವೆಂಕಟೇಶ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅಲ್ಯೂಮಿನಿಯಂ ಬಾಬುವಿನ ಅರೆ ಸುಟ್ಟ ಮೃತದೇಹ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ. ಡೆಂಕಣಿಕೋಟೆ ಸಮೀಪದ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದೆ. ಹತ್ಯೆ ನಡೆಸಿ ಶವವನ್ನು ಕಾಡಿನಲ್ಲಿ ಎಸೆದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ದ್ವೇಷದ ರಾಜಕಾರಣ ಕೊನೆಗಾಣಿಸುವುದೇ ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.