ಚಿಕ್ಕಮಗಳೂರು: ಐದು ವರ್ಷದ ಹಿಂದೆ ಬಿಜೆಪಿ ಮುಖಂಡ ಅನ್ವರ್ ಕೊಲೆಗೀಡಾದ ಹಿನ್ನಲೆ ಅವರ ಕುಟುಂಬಸ್ಥರು ಅದಿನಿಂದ ಇಂದಿನವರೆಗೂ ನ್ಯಾಯಕ್ಕಾಗಿ ಪರಿತಪ್ಪಿಸುತ್ತಿದ್ದಾರೆ. ಆರೋಪಿಗಳನ್ನು ಬಂಧಿಸದ ಹಿನ್ನಲೆ  ಅನ್ವರ್ ಕುಟುಂಬಸ್ಥರು ದಯಾಮರಣಕ್ಕೆ ಅನುಮತಿ ನೀಡುವಂತೆ ಪತ್ರ ಬರೆದಿದ್ದಾರೆ. 


COMMERCIAL BREAK
SCROLL TO CONTINUE READING

ಕೊಲೆ ಪ್ರಕರಣ ಸಂಬಂಧ ಅನ್ವರ್ ಸಹೋದರ ಕಬೀರ್, ನನ್ನ ಸಹೋದರ ಕೊಲೆಯಾಗಿ ಐದು ವರ್ಷವಾಯ್ತು. ಐದು ವರ್ಷದಿಂದ ಆರೋಪಿಗಳನ್ನ ಇಂದಿಗೂ ಬಂಧಿಸಿಲ್ಲ. ನನ್ನ ಸಹೋದರನ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ನಮಗೆ ನ್ಯಾಯ ಕೊಡಿಸಿ ಇಲ್ಲ ದಯಾಮರಣಕ್ಕೆ ಅನುಮತಿ ನೀಡಿ ಎಂದು ಐದು ವರ್ಷದ ಹಿಂದೆ ಕೊಲೆಗೀಡಾದ ಬಿಜೆಪಿ ಮುಖಂಡ ಅನ್ವರ್ ಸಹೋದರ ಕಬೀರ್ ಜಿಲ್ಲಾಧಿಕಾರಿಗೆ ಮನವಿ ಮಾಡಿ ರಾಷ್ಟ್ರಪತಿಗೂ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಡಾ. ಎಂ‌.ಸಿ ಸುಧಾಕರ್


ನಮ್ಮ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿ-ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ನಡೆಸಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರಿಂದ ಅಂದಿನ ಬಿಜೆಪಿ ಸರ್ಕಾರ ಪ್ರಕರಣವನ್ನ ಸಿಐಡಿ ತನಿಖೆಗೆ ನೀಡಿತ್ತು.


ಸದ್ಯ ಸಿಐಡಿಯವರು ತನಿಖೆ ನಡೆಸುತ್ತಿದ್ದರು ಆರೋಪಿಗಳ ಸುಳಿವು ಈವರೆಗೂ ಪತ್ತೆಯಾಗಿಲ್ಲ ಎಂದು ಆರೋಪಿಸಿದ್ದಾರೆ. ಪದೇ-ಪದೇ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ ಮಾಡುತ್ತಿರುವುದು ಕೂಡ ತನಿಖೆ ವಿಳಂಬವಾಗುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಗ್ರಾಹಕರ ಜೇಬಿಗೆ ಕತ್ತರಿ ಹಾಕಲು ಸಿದ್ಧತೆ- ಮಾಜಿ ಪಶುಸಂಗೋಪನಾ ಸಚಿವ


ಹಿಂದೆ ನಮ್ಮದೇ ಸರಕಾರ ಅಧಿಕಾರದಲ್ಲಿತ್ತು. ಈ ವೇಳೆ ಅಂದಿನ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರು ಪ್ರಕರಣದ ತನಿಖೆಯನ್ನ ಸರಕಾರ ಸಿಐಡಿಗೆ ಒಪ್ಪಿಸಿದೆ. ನಮ್ಮದೇ ಸರಕಾರ ಇದ್ದರೂ ಪ್ರಕರಣದ ತನಿಖೆ ಸಮರ್ಪಕವಾಗಿ ನಡೆಯದಿರುವುದರ ಬಗ್ಗೆ ಬೇಸರವಿದೆ ಎಂದು ಬಿಜೆಪಿ ಸರ್ಕಾರದ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.