ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆರ್ ಡಿ ಪಾಟೀಲ್‌ರನ್ನು ಮಹಾರಾಷ್ಟ್ರದ ಸೋಲಾಪುರದ ಬಳಿ ಸಿಐಡಿ ತಂಡ ವಶಕ್ಕೆ ಪಡೆದಿದೆ. 


COMMERCIAL BREAK
SCROLL TO CONTINUE READING

ಬ್ಲೂಟೂತ್ ಬಳಸಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಹೊತ್ತಿರುವ ಆರ್‌.ಡಿ ಪಾಟೀಲ್‌ ಒಂದು ವಾರದಿಂದ ತಲೆಮರೆಸಿಕೊಂಡಿದ್ದರು. ಆರ್‌.ಡಿ ಪಾಟೀಲ್‌ ಅವರ ಅಣ್ಣ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್‌ರನ್ನು ಪೊಲೀಸರು ಶುಕ್ರವಾರದಂದು ಬಂಧಿಸಿದ್ದರು. ಇನ್ನು ಆ ಬಳಿಕ ಆರ್‌.ಡಿ ಪಾಟೀಲ್‌ರ ಪತ್ತೆಗೆ ಬಲೆ ಬೀಸಿದ ಪೊಲೀಸರು, ಮೊಬೈಲ್ ಲೊಕೇಶನ್ ಪತ್ತೆ ಮಾಡಿ ತನಿಖೆ ಕೈಗೊಂಡಿದ್ದರು. ಬಳಿಕ ಆರೋಪಿ ಮಹಾರಾಷ್ಟ್ರದ ಸೋಲಾಪುರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. 


ಇದನ್ನು ಓದಿ: PSI Recruitment Scam: ಇನ್ನೂ ಪತ್ತೆಯಾಗದೆ ತಲೆಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ!


ಪ್ರಕರಣದ ಹಿನ್ನೆಲೆ: 
ಪಿಎಸ್ಐ ನೇಮಕಾತಿ ಪರೀಕ್ಷೆ ವೇಳೆ ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಬ್ಲ್ಯೂಟೂತ್ ಮೂಲಕ ಸಹಾಯ ಮಾಡಿದ್ದಾರೆ ಎಂಬ ಆರೋಪ ರುದ್ರಗೌಡ ಮೇಲಿದೆ. 


ಇದನ್ನು ಓದಿ: "ಪರೀಕ್ಷೆಗೆ ಹಾಜರಾದರೆ ಕ್ರಿಮಿನಲ್‌ ಕೇಸ್‌"...ರಘುಪತಿ ಭಟ್‌ ವಿರುದ್ಧ ಆರೋಪ


ಆದರೆ ಕಳೆದ ಒಂದು ವಾರದಿಂದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪೊಲೀಸರ ಕೈಗೆ ಸಿಗದೆ ಕಣ್ಮರೆಯಾಗಿದ್ದಾರೆ. ದಿವ್ಯಾ ಹಾಗರಗಿ ಒಡೆತನದ ಜ್ಞಾನಜೋತಿ ಶಾಲೆಯಲ್ಲಿಯೇ ಅಕ್ರಮ ನಡೆದಿತ್ತು. ಇದೇ ಪರೀಕ್ಷಾ ಕೇಂದ್ರದಲ್ಲಿ 11ಕ್ಕೂ ಹೆಚ್ಚು ಅಭ್ಯರ್ಥಿಗಳು ಅಕ್ರಮವಾಗಿ ಪರೀಕ್ಷೆ ಬರೆದಿದ್ದರು. ಕಳೆದ ಒಂದು ವಾರದಿಂದ ರಾಜ್ಯ, ನೆರೆ ರಾಜ್ಯಗಳಲ್ಲಿ ದಿವ್ಯಾರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆದರೆ, ಫೋನ್ ಸ್ವಿಚ್ ಆಫ್ ಮಾಡಿಕೊಂಡಿರುವ ದಿವ್ಯಾ ಹಾಗರಗಿ ಖಾಕಿ ಪಡೆಯ ಕೈಗೆ ಸಿಗದೆ ಎಸ್ಕೇಪ್ ಆಗಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.