ಬೆಂಗಳೂರು: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದ ಪ್ರಸಿಡೆಂಟ್ ಹೋಟೆಲ್‌ನಲ್ಲಿ ಚಂದ್ರಶೇಖರ್‍ ಗುರೂಜಿ ತಂಗಿದ್ದರು.


COMMERCIAL BREAK
SCROLL TO CONTINUE READING

ಇಂದು ಬೆಳಗ್ಗೆ ಭಕ್ತರ ಸೋಗಿನಲ್ಲಿ ಹೋಟೆಲ್‍ಗೆ ಬಂದ ದುಷ್ಕರ್ಮಿಗಳು ಗುರೂಜಿ ಬಳಿ ಆಶೀರ್ವಾದ ಪಡೆಯುವ ನಾಟಕವಾಡಿದ್ದಾರೆ. ರಿಸಪ್ಶನ್‌ ಬಳಿ ಕುಳಿತ್ತಿದ್ದ ಗುರೂಜಿಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವ ನಾಟಕವಾಡಿದ ದುಷ್ಕಮಿಗಳು ಏಕಾಏಕಿ ಅವರಿಗೆ ಚಾಕುವಿನಿಂದ ಹಲವಾರು ಬಾರಿ ಇರಿದಿದ್ದಾರೆ. ಈ ವೇಳೆ ಹೋಟೆಲ್ ಸಿಬ್ಬಂದಿ ಗುರೂಜಿ ರಕ್ಷಿಸಲು ಮುಂದಾಗಿದ್ದಾರೆ. ಆದರೆ, ದುಷ್ಕರ್ಮಿಗಳು ಅವರಿಗೆ ಚಾಕು ತೋರಿಸಿ ಬೆದರಿಸಿದ್ದಾರೆ.


ಇದನ್ನೂ ಓದಿ: ಬೆಳ್ಳಂ‌ಬೆಳಿಗ್ಗೆ ಶಾಸಕ‌ ಜಮೀರ್‌ಗೆ ಎಸಿಬಿ ಶಾಕ್‌: ಮನೆ ಸೇರಿ ಐದು ಕಡೆ ಏಕಕಾಲಕ್ಕೆ ರೇಡ್‌


ದುಷ್ಕರ್ಮಿಗಳಿಂದ ಬಿಡಿಸಿಕೊಳ್ಳಲು ಚಂದ್ರಶೇಖರ್ ಗುರೂಜಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಹಲವಾರು ಬಾರಿ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲೇ ಗುರೂಜಿ ಪ್ರಾಣಬಿಟ್ಟಿದ್ದಾರೆ. ಇಬ್ಬರು ದುಷ್ಕರ್ಮಿಗಳು ಗುರೂಜಿಗೆ ಚಾಕು ಇರಿಯುವ ದೃಶ್ಯ ಹೋಟೆಲ್‍ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ.


ಕಿಮ್ಸ್ ಆಸ್ಪತ್ರೆಗೆ ಚಂದ್ರಶೇಖರ್ ಗುರೂಜಿಯವರ ಮೃತದೇಹವನ್ನು ರವಾನೆ ಮಾಡಲಾಗಿದೆ. ವಾಸ್ತು ಜೋತಿಷ್ಯದಿಂದ ನೊಂದವರಿಂದಲೇ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ. ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಕಾರ್ಯಾಚರಣೆ ಶುರುಮಾಡಿದ್ದಾರೆ.


ಇದನ್ನೂ ಓದಿ: PSI Recruitment Scam: ‘ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ’


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ