ಬೆಂಗಳೂರು: ಸಾರ್ವಜನಿಕರನ್ನ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ರೌಡಿ ಆಸಾಮಿ ಮತ್ತವನ ಗ್ಯಾಂಗನ್ನು ಆರ್ ಟಿ.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲದ ಇಮ್ರಾನ್ ಅಲಿಯಾಸ್ ಬೊಡ್ಕೆ, ಸೈಯದ್ ಮಾಜ್, ಇರ್ಫಾತ್ ಅಹಮದ್, ಮೋಹಿತ್ @ಮೋಹನ್ ಬಂಧಿತ ಆರೋಪಿಗಳು. 


COMMERCIAL BREAK
SCROLL TO CONTINUE READING

ನವೆಂಬರ್ 21ರಂದು ರಾತ್ರಿ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದಿಣ್ಣೂರು ಮುಖ್ಯರಸ್ತೆಯಲ್ಲಿರುವ ನೇಚರ್ ಬಾರ್ ಅಂಡ್ ರೆಸ್ಟೋರೆಂಟ್‌ಗೆ ನುಗ್ಗಿದ್ದ ಈ ಕಿರಾತಕರು ಮಾರಕಾಸ್ತ್ರ ತೋರಿಸಿ ಸುಮಾರು 40 ಸಾವಿರ ರೂಪಾಯಿವರೆಗೂ ಸುಲಿಗೆ ಮಾಡಿದ್ದರು.ಬಳಿಕ ಅದೇ ಮಾರ್ಗದಲ್ಲಿ ಬೀಡಾ ಅಂಗಡಿ ಮಾಲೀಕನೊಬ್ಬನನ್ನ ಬೆದರಿಸಿ ಆತನ ಮೇಲೆ ಹಲ್ಲೆ ಮಾಡಿದ್ದರು.


ಇದನ್ನೂ ಓದಿ: ಬೆಂಗಳೂರು ಕಂಬಳ ಸಂಭ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗಿ 


ಅಷ್ಟೇ ಅಲ್ಲದೇ ಮೋದಿ ರಸ್ತೆ, ಹುಸೇನಾ ಮಸೀದಿ, ಪಿ.ಎನ್.ಟಿ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋಗಳನ್ನ ಜಖಂಗೊಳಿಸಿದ್ದರು.ಆರೋಪಿ ಮತ್ತವನ ಕಡೆಯವರ ಕೃತ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಆರ್.ಟಿ.ನಗರ ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಸದ್ಯ ಆರ್.ಟಿ.ನಗರ ಠಾಣಾ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. 


ಬಂಧಿತ ಇಮ್ರಾನ್, ಆರ್.ಟಿ.ನಗರ ಹಾಗೂ ಜೆ.ಸಿ.ನಗರ ಠಾಣಾ ವ್ಯಾಪ್ತಿಯ ರೌಡಿ ಆಸಾಮಿಯಾಗಿದ್ದು ಕಳೆದ ಆಗಸ್ಟ್‌ನಲ್ಲಿ ಜೆ.ಸಿ.ನಗರ ಪೊಲೀಸರಿಂದ ಬಂಧಿತನಾಗಿದ್ದ. ಸದ್ಯ ಈ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ.


ಇದನ್ನೂ ಓದಿ: ಫೋನ್ ನಲ್ಲಿ ಪದೇ ಪದೇ ಬರುವ ಜಾಹೀರಾತುಗಳಿಂದ ತಲೆ ಚಿಟ್ಟು ಹಿಡಿದಿದೆಯಾ? ಈ ಸಣ್ಣ ಸೇಟ್ಟಿಂಗ್ ಮಾಡ್ಕೊಳ್ಳಿ ಸಾಕು! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.