Firing in Jaipur Mumbai express: ಜೈಪುರ-ಮುಂಬೈ ಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ನಲ್ಲಿ ಗುಂಡಿನ ದಾಳಿಯಲ್ಲಿ ಎಎಸ್‌ಐ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಜೈಪುರ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಪಾಲ್ಘರ್ ನಿಲ್ದಾಣವನ್ನು ದಾಟಿದ ನಂತರ ಚಲಿಸುತ್ತಿದ್ದ ರೈಲಿನೊಳಗೆ ಆರ್‌ಪಿಎಫ್ ಕಾನ್‌ಸ್ಟೆಬಲ್ ಗುಂಡು ಹಾರಿಸಿದ್ದು ಈ ದುರ್ಘಟನೆ ನಡೆದಿದೆ. 


COMMERCIAL BREAK
SCROLL TO CONTINUE READING

ಜೈಪುರ-ಮುಂಬೈ ಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಪಾಲ್ಘರ್ ನಿಲ್ದಾಣವನ್ನು  ಬಿಟ್ಟು ಮುಂದೆ ಸಾಗುತ್ತಿದ್ದಂತೆ ಆರ್‌ಪಿಎಫ್ ಕಾನ್‌ಸ್ಟೆಬಲ್ ಮೊದಲಿಗೆ ಓರ್ವ ಆರ್‌ಪಿಎಫ್ ಎಎಸ್‌ಐ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಬಳಿಕ ಮತ್ತೊಂದು ಬೋಗಿಗೆ ಹೋಗಿ ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದು ಬಳಿಕ ದಹಿಸರ್ ನಿಲ್ದಾಣದ ಬಳಿ ರೈಲಿನಿಂದ ಜಿಗಿದಿದ್ದಾನೆ. ನಂತರ ಆರೋಪಿ ಕಾನ್‌ಸ್ಟೆಬಲ್ ನನ್ನು ಆತನ ಶಸ್ತ್ರಾಸ್ತ್ರ ಸಮೇತ ಬಂಧಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.  


ಇದನ್ನೂ ಓದಿ- ವೀಕೆಂಡ್ ಮಸ್ತಿ, ಎಣ್ಣೆ ಏಟು: ಸಿಲಿಕಾನ್ ಸಿಟಿಯಲ್ಲಿ 2 ಅಪಘಾತ, ಯುವತಿಯರ ರಂಪಾಟ


ಆರೋಪಿ, ಆರ್‌ಪಿಎಫ್ ಕಾನ್ಸ್‌ಟೇಬಲ್ ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಬೆಳಿಗ್ಗೆ ಐದು ಗಂಟೆಯ ಸುಮಾರಿಗೆ ತನ್ನ ಅಧಿಕೃತ ಸ್ವಯಂಚಾಲಿತ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿ, ಮತ್ತೊಬ್ಬ ಆರ್‌ಪಿಎಫ್ ಸಹೋದ್ಯೋಗಿ, ಅವರ ಬೆಂಗಾವಲು ಕರ್ತವ್ಯದ ಎಎಸ್‌ಐ ಟಿಕಾ ರಾಮ್ ಮೀನಾ ಮತ್ತು ರೈಲಿನಲ್ಲಿದ್ದ ಮೂವರು ಪ್ರಯಾಣಿಕರನ್ನು ಹತ್ಯೆಗೈದಿದ್ದಾನೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.


ಟಿಕಾ ರಾಮ್ ಮೀನಾ ರಾಜಸ್ಥಾನದ ಸವಾಯಿ ಮಾಧೋಪುರ ನಿವಾಸಿಯಾಗಿದ್ದು, ಚೇತನ್ ಸಿಂಗ್ ಉತ್ತರ ಪ್ರದೇಶದ ಹತ್ರಾಸ್ ಮೂಲದವರು ಎಂದು ತಿಳಿದುಬಂದಿದೆ.  


ಇದನ್ನೂ ಓದಿ- Punjab ಮಾಜಿ ಉಪಮುಖ್ಯಮಂತ್ರಿ ಓಪಿ ಸೋನಿ ಅವರನ್ನು ವಶಕ್ಕೆ ಪಡೆದ ವಿಜಿಲೆನ್ಸ್, ಕಾರಣ ಏನು?


ಮುಂಬೈ ಸೆಂಟ್ರಲ್ ರೈಲು ನಿಲ್ದಾಣದಿಂದ ದೃಶ್ಯಗಳು... 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.