Big News: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Written by - Zee Kannada News Desk | Last Updated : Jul 5, 2022, 03:08 PM IST
  • ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ
  • ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬರ್ಬರವಾಗಿ ಹತ್ಯೆ
  • ಭಕ್ತರ ಸೋಗಿನಲ್ಲಿ ಚಾಕು ಇರಿದು ಕೊಲೆ ಮಾಡಿ ಪರಾರಿ
Big News: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ title=
ಚಂದ್ರಶೇಖರ್ ಗುರೂಜಿ ಕೊಲೆ

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆಯಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಕ್ತರ ಸೋಗಿನಲ್ಲಿ ಬಂದಿದ್ದ ಹಂತಕರು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸರಳ ವಾಸ್ತು ಸಲಹೆ ನೀಡುತ್ತಿದ್ದ ಚಂದ್ರಶೇಖರ್‌ ಗುರೂಜಿ ಹಲವು ಪುಸ್ತಕಗಳನ್ನೂ ಸಹ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು.

ಇದನ್ನೂ ಓದಿ: ಬೆಳ್ಳಂ‌ಬೆಳಿಗ್ಗೆ ಶಾಸಕ‌ ಜಮೀರ್‌ಗೆ ಎಸಿಬಿ ಶಾಕ್‌: ಮನೆ ಸೇರಿ ಐದು ಕಡೆ ಏಕಕಾಲಕ್ಕೆ ರೇಡ್‌

ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಪರಿಶೀಲನೆ ನಡೆಸಿದರು. ಯಾವ ಕಾರಣಕ್ಕಾಗಿ ಗುರೂಜಿ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್‍ನ ರಿಸಪ್ಶನ್‌ ಬಳಿಯೇ ಗುರೂಜಿಗೆ ಹಲವಾರು ಬಾರಿ ಚಾಕು ಇರಿದು ಹಂತಕರು ಎಸ್ಕೇಪ್ ಆಗಿದ್ದಾರೆ.

ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗುತ್ತಿರುವ ದೃಶ್ಯವು ಹೋಟೆಲ್‍ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಲೈ 2ರಂದು ಹೋಟೆಲ್‌ಗೆ ಆಗಮಿಸಿದ್ದ ಚಂದ್ರಶೇಖರ್‌ ಗುರೂಜಿ ನಾಳೆ ರೂಂ ಖಾಲಿ ಮಾಡಬೇಕಿತ್ತು. ಇಂದು ಬೆಳಗ್ಗೆ ರಿಶಪ್ಶನ್‌ನಲ್ಲಿ ಕುಳಿತಿದ್ದ ವೇಳೆ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕಾರ ಮಾಡುವಂತೆ ನಟಿಸಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹೋಟೆಲ್‌ ಸಿಬ್ಬಂದಿ ಬಳಿ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: PSI Recruitment Scam: ಅಮೃತ್ ಪೌಲ್ ಬಂಧಿಸಿದ ಸಿಐಡಿ ತಂಡಕ್ಕೆ ಎಚ್‌ಡಿಕೆ ಅಭಿನಂದನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News