ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಎರಡನೇ ಪೋಕ್ಸೋ ಕೇಸ್ ದಾಖಲಾಗಿದ್ದ  ಜಾಮೀನು ರಹಿತ  ವಾರಂಟ್ ಜಾರಿಯಾಗಿದೆ. ವಾರಂಟ್ ಜಾರಿಗೊಳಿಸಿ ನ್ಯಾಯಾಧೀಶೆ ಬಿ.ಕೆ ಕೋಮಲಾ ಆದೇಶ ಹೊರಡಿಸಿದ್ದು ಆರೋಪಿ ಮುರುಘಾ ಶರಣರನ್ನು ಕೂಡಲೇ ಬಂಧಿಸುವಂತೆಯೂ ಮತ್ತು ಇಂದು ಸಾಯಂಕಾಲದೊಳಗೆ ನ್ಯಾಯಾಲಯದ ಮುಂದೆ ಹಾಜರ್ ಪಡಿಸಲು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಶುರುವಾಗಿದೆ.


COMMERCIAL BREAK
SCROLL TO CONTINUE READING

ದಾವಣಗೆರೆಯ ವಿರಕ್ತ ಮಠದಲ್ಲಿರುವ ಶರಣರು ಆರಾಮವಾಗಿ ಕಾಲ ಕಳೆಯುತ್ತಿದ್ದರು. ಅದ್ಯಾವಾಗ ಕೋರ್ಟ್ ನ ಮಾಹಿತಿ ಬಂತೋ ಶಾಕ್ ಆಗಿದ್ದಾರೆ.  ವಾರಂಟ್ ಆಧರಿಸಿ ಜಾಮೀನು ರಹಿತ ವಾರಂಟ್ ಜಾರಿಮಾಡಿರುವ ಮಾಹಿತಿ ತಿಳಿದು ಬೆಚ್ಚಿ ಬೀಳಿಸಿದೆ. 


ಇದನ್ನೂ ಓದಿ- ಸಿಎಂ ಸಿದ್ದರಾಮಯ್ಯ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆ  


2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಬಿ.ಕೆ ಕೋಮಲಾ ಅವರು ದೇಶದ ಟಾಪ್ ಟೆನ್ ನ ಜಡ್ಜ್ ಎಂಬ ಹೆಸರು ಪಡೆದದ್ದೇ ಇದೇ ಕೇಸ್ ನಿಂದ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಾಡಿ ವಾರಂಟ್ ಮೇಲೆ ನಡೆದಿದ್ದ ವಿಚಾರಣೆ ಇದೀಗ ಹೊರಬಿದ್ದಿದೆ. ಕೂಡಲೇ ಆರೋಪಿ ಮುರುಘಾ ಶರಣರನ್ನು ಬಂಧಿಸುವಂತೆ ಆದೇಶ ಮಾಡಿದೆ.


ಇದನ್ನೂ ಓದಿ- ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು


ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಹಿನ್ನಲೆಯಲ್ಲಿ ಮುರುಘ ಶ್ರೀಗಳಿಗೆ ಬಂಧನದ ಭೀತಿ ಎದುರಾಗಿದ್ದು, ದಾವಣಗೆರೆಯ ವಿರಕ್ತ ಮಠದಲ್ಲಿರುವ ಶಿವಮೂರ್ತಿ ಮುರುಘಾ ಸ್ವಾಮೀಜಿಗಳನ್ನು ಬಂಧಿಸಲು
ವಿರಕ್ತ ಮಠಕ್ಕೆ ಪೋಲೀಸ್ ಸಿಬ್ಬಂದಿ ತೆರಳಿದ್ದಾರೆ. 


ಮೊದಲ ಪ್ರಕರಣದಲ್ಲಿ ಬಿಡುಗಡೆಯಾಗಿ ಎರಡೇ ದಿನಗಳ ನಂತರ ಮತ್ತೆ ಎರಡನೇ ಪೋಕ್ಸೋ ಪ್ರಕರಣದಲ್ಲಿ ಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಇಂದು ಸಂಜೆಯೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ  ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.