ಹಾವೇರಿ : ಕೆಜಿಎಫ್ 2  ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡು ಹಾರಿಸಿದ್ದ ಘಟನೆ ಜಿಲ್ಲೆಯ ಶಿಗ್ಗಾವಿ ನಗರದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ನಗರದ ರಾಜಶ್ರೀ ಚಿತ್ರಮಂದಿರದಲ್ಲಿ ವಸಂತ್ ಎಂಬ ಯುವಕನ ಮೇಲೆ ಸಂತೋಷ್ ಅಲಿಯಾಸ್ ಮಲಿಕ್ ಎಸ್ ಪಾಟೀಲ್ ಗುಂಡು ಹಾರಿಸಿದ್ದಾನೆ. ಈ ಘಟನೆ ಕಳೆದ ಏಪ್ರಿಲ್ 20 ರಾತ್ರಿ 10.30 ಕ್ಕೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 


ಇದನ್ನೂ ಓದಿ : ಸಿನಿಮೀಯ ಶೈಲಿಯಲ್ಲಿ ಕಿಡ್ನ್ಯಾಪ್ : ಮೂವರು ಆರೋಪಿಗಳ ಬಂಧನ


ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಕೆಜಿಎಫ್ 2  ಸಿನಿಮಾ ವೀಕ್ಷಣೆ ಸಂದರ್ಭದಲ್ಲಿ ವಸಂತ್ ಮುಂದಿನ ಸೀಟ್ ಮೇಲೆ ಕಾಲು ಹಾಕಿ ಕುಳಿತಿದ್ದ. ಇದನ್ನೂ ಪ್ರಶ್ನಿಸಿದ್ದ ಆರೋಪಿ  ಸಂತೋಷ್ ಅಲಿಯಾಸ್ ಮಲಿಕ್, ಈ ವೇಳೆ ಇಬ್ಬರ ನಡುವೆ ಜಗಳ ಶುರುವಾಗಿತ್ತು. ಐದು ನಿಮಿಷ ಥಿಯೇಟರ್ ನಿಂದ ಆಚೆ ಹೋಗಿ ಗನ್ ತೆಗೆದುಕೊಂಡು ಬಂದ ಸಂತೋಷ್ ಅಲಿಯಾಸ್ ಮಲಿಕ್ ವಸಂತ್ ಮೇಲೆ ಎರಡು ಗುಂಡು ಹಾರಿಸಿದ್ದಾನೆ. ಗುಂಡು ವಸಂತ್ ಹೊಟ್ಟೆಗೆ ತಗುಲಿವೆ. ಆದ್ರೆ, ವಸಂತ್ ಪ್ರಾಣಾಪಾಯದಿಂದ ಪಾರಾಗಿದ್ದು ಸದ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಫೈರ್ ಮಡಿದ ನಂತರ ಆರೋಪಿ ಸಂತೋಷ್ ಅಲಿಯಾಸ್ ಮಲಿಕ್ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ನಡೆದು ವಾರ ಕಳೆದರೂ ಆರೋಪಿ ಸಂತೋಷ್ ಪತ್ತೆಯಾಗಿಲ್ಲ. 


ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಆರೋಪಿ ಸಂತೋಷ್ ಅಲಿಯಾಸ್ ಮಲಿಕ್ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ. 


[[{"fid":"237526","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.