ಮೈಸೂರು: ಮೈಸೂರಿನಲ್ಲಿ ಬುಧವಾರ ಘೋರ ದುರಂತವೊಂದು ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಯರೆಗನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 


COMMERCIAL BREAK
SCROLL TO CONTINUE READING

ಬಟ್ಟೆ ಐರನ್‌ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ(45), ಅರ್ಚನಾ (19) ಹಾಗೂ ಸ್ವಾತಿ (17) ಎಂಬುವರ ಶವಗಳು ಪತ್ತೆಯಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 


ಇದನ್ನೂ ಓದಿ: ಚಾಮರಾಜನಗರ, ತುಮಕೂರು ಸೇರಿ ಹಲವೆಡೆ ವರುಣಾರ್ಭಟ


ಸಿಲಿಂಡರ್ ಸೋರಿಕೆ ಮೃತಪಟ್ಟಿರುವ ಶಂಕೆ


ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರೂ ಎರಡು ದಿನದ ಹಿಂದೆಯೇ  ಮೃತಪಟ್ಟಿರುವ ಬಗ್ಗೆ ತಿಳಿದುಬಂದಿದೆ. ಮೂಲತಃ ಚಿಕ್ಕಮಗಳೂರು ಸಖರಯಪಟ್ಟಣದ ಈ ಕುಟುಂಬಸ್ಥರು ಕಳೆದ 30 ವರ್ಷದಿಂದ ಮೈಸೂರಿನಲ್ಲಿ ವಾಸವಾಗಿದ್ದರು. 


ನಾಲ್ವರೂ ಗುರುವಾರವಷ್ಟೇ ಸಂಬಂಧಿಕರ ಮದುವೆ ಹೋಗಿದ್ದರು. ಮದುವೆ ಮುಗಿಸಿಕೊಂಡು ಸಖರಯಪಟ್ಟಣಕ್ಕೆ ಹೋಗಿದ್ದ ಅವರು ಬಳಿಕ ಇದೇ ಸೋಮವಾರ ಬೆಳಗ್ಗೆ ಮೈಸೂರಿಗೆ ವಾಪಸ್ಸಾಗಿದ್ದರು. ಸೋಮವಾರ ರಾತ್ರಿ ಅನಿಲ ಸೋರಿಕೆಯಾಗಿದೆ. ಇದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 


ಇದನ್ನೂ ಓದಿ: ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳ ರೇಡ್ ಪ್ರಕರಣ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews