ದೇವಸ್ಥಾನವನ್ನೆ ಬಾರ್ ಅಂಡ್ ರೆಸ್ಟೋರೆಂಟ್ ಮಾಡಿಕೊಂಡ ಕಿಡಿಗೇಡಿಗಳು..!

ದೇವಸ್ಥಾನದ ಆವರಣದಲ್ಲಿರುವ ಹೊಟೇಲ್ ಗಳು ಇಲ್ಲಿಗೆ ಬರುವ ಭಕ್ತರಿಗೆ ಉಪಹಾರ ಮಾರಾಟ ಮಾಡುತ್ತಿದ್ದುವು. ಆದ್ರೆ ಸದ್ಯ ಹೆಚ್ಚಿನ ಜನ ಬರುವದರಿಂದ ತಮ್ಮ ವ್ಯಾಪಾರವನ್ನು ಹೆಚ್ಚಿಸಿಕೊಳ್ಳಲು ಮದ್ಯ ಮಾರಾಟ ಮಾಡಲು ಶುರು ಮಾಡಿದ್ದಾರೆ. ಇದರಿಂದ ದೇವಸ್ಥಾನದ ಆವರಣದಲ್ಲಿ ಎಣ್ಣಿ ಪಾರ್ಟಿ ಮಾಡುವ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ.

Written by - Yashaswini V | Last Updated : Dec 26, 2023, 08:00 AM IST
  • ಇತಿಹಾಸ ಪ್ರಸಿದ್ದ ದೇವಾಲಯಕ್ಕೆ ಕುಡುಕರ ಕಾಟ.
  • ಹೋಟೆಲಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ
  • ಗುತ್ತಿಬಸವೇಶ್ವರ ದೇವಸ್ಥಾನದ ಆವರಣ ಹೋಟೆಲಗಳಲ್ಲಿ ಮದ್ಯ ಮಾರಾಟ
ದೇವಸ್ಥಾನವನ್ನೆ ಬಾರ್ ಅಂಡ್ ರೆಸ್ಟೋರೆಂಟ್ ಮಾಡಿಕೊಂಡ ಕಿಡಿಗೇಡಿಗಳು..! title=

ಅದು  ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನ. ಆದ್ರೆ ದೇವಸ್ಥಾನಕ್ಕೆ ಬರುವ ಭಕ್ತರಿಗಿಂತ ಕುಡುಕರೆ ತಮ್ಮ ಅಡ್ಡವಾಗಿ ಮಾಡಿಕೊಂಡಿದ್ದು  ಭಕ್ತರ ಭಾವನೆಗಳನ್ನು ಕೆರಳಿಸುವಂತೆ ಮಾಡಿದೆ.

ಹೌದು, ಚಿತ್ರಣದಲ್ಲಿ ತೋರಿಸಿರುವಂತೆ ಹೀಗೆ ದೇವಸ್ಥಾನದ ಆವರಣದ ತುಂಬಾ ಬಿದ್ದಿರುವ ಮದ್ಯದ ಬಾಟಲಿಗಳು ಕುಡುಕರ ಕಾಟಕ್ಕೆ ಬೇಸತ್ತಿರುವ ಭಕ್ತರು ಇದೆಲ್ಲಾ ಕಂಡು ಬಂದಿದ್ದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವೇಶ್ವೇರ ದೇವಸ್ಥಾನದಲ್ಲಿ.  ಇತಿಹಾಸ ಪ್ರಸಿದ್ದಿ ಪಡೆದಿರುವ ಈ ದೇವಾಲಯ ಜಿಲ್ಲಾಡಳಿತ ವ್ಯಾಪ್ತಿಗೆ ಬರುತ್ತದೆ. ನೆರೆಯ ಮಹಾರಾಷ್ಟ್ರ ಹಾಗೂ ಕರ್ನಾಟಕದ ಹಲವು ಭಾಗಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಆದರೀಗ ದೇವಸ್ಥಾನವನ್ನೆ ಬಾರ್ ಅಂಡ್ ರೆಸ್ಟೋರೆಂಟ್ ಮಾಡಿಕೊಂಡ ಕಿಡಿಗೇಡಿಗಳಿಂದಾಗಿ ಇಲ್ಲಿಗೆ ಬರುವ ಭಕ್ತರಿಗೆ ಆತಂಕ ಶುರುವಾಗಿದೆ.

ಇದನ್ನೂ ಓದಿ- West Bengal: ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದು ಮೂವರು ಯುವಕರು ಸಾವು!

ದೇವಸ್ಥಾನದ ಆವರಣದಲ್ಲಿರುವ ಹೊಟೇಲ್ ಗಳು ಇಲ್ಲಿಗೆ ಬರುವ ಭಕ್ತರಿಗೆ ಉಪಹಾರ ಮಾರಾಟ ಮಾಡುತ್ತಿದ್ದುವು. ಆದ್ರೆ ಸದ್ಯ ಹೆಚ್ಚಿನ ಜನ ಬರುವದರಿಂದ ತಮ್ಮ ವ್ಯಾಪಾರವನ್ನು ಹೆಚ್ಚಿಸಿಕೊಳ್ಳಲು ಮದ್ಯ ಮಾರಾಟ ಮಾಡಲು ಶುರು ಮಾಡಿದ್ದಾರೆ. ಇದರಿಂದ ದೇವಸ್ಥಾನದ ಆವರಣದಲ್ಲಿ ಎಣ್ಣಿ ಪಾರ್ಟಿ ಮಾಡುವ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಕುಟುಂಬ ಸಮೇತ ಬರುವ ಭಕ್ತರಿಗೆ ಆತಂಕ ಶುರುವಾಗಿದೆ. ಇಲ್ಲಿನ ಮದ್ಯ ಮಾರಾಟದ ಬಗ್ಗೆ ಜಿಲ್ಲಾಡಳಿತ ಹಾಗೂ ಅಬಕಾರಿ ಇಲಾಖೆಗೆ ಮಾಹಿತಿ ನೀಡಿದ್ರೂ ನೋ ಯೂಸ್ ಎನ್ನುವದು ಇಲ್ಲಿನ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.   ದೇವಸ್ಥಾನದ ಪವಿತ್ರತೆ ಹಾಳು ಮಾಡುತ್ತಿದ್ದಾರೆ ಕೂಡಲೇ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆನ್ನುವುದು ಭಕ್ತರ ಒತ್ತಾಯವಾಗಿದೆ.

ಇದನ್ನೂ ಓದಿ- ಅಕ್ರಮ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಪತ್ನಿ ಮೇಲೆ ಚಾಕುವಿನಿಂದ ಹಲ್ಲೆ

ಒಟ್ಟಿನಲ್ಲಿ ದೇವಸ್ಥಾನದ ಆವರಣದ ಟಿಫನ್ ಸೆಂಟರ್ ಇಟ್ಟುಕೊಂಡು ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಇಲ್ಲಿನ ಸ್ಥಳೀಯ ಅಧಿಕಾರಿಯಲು ಕ್ರಮಕೈಗೊಳ್ಳಲು ಮುಂದಾಗದಿರುವುದು ವಿಪರ್ಯಾಸ.  ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾ ಕಾದು ನೋಡಬೇಕಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News