Tripura Rath Yatra: ತ್ರಿಪುರಾದ ‘ಉಲ್ಟಾ ರಥ ಯಾತ್ರೆ’ ದುರಂತ, ಸಾವಿನ ಸಂಖ್ಯೆ 8ಕ್ಕೇರಿಕೆ!

Tripura Ulto Rath Yatra tragedy: ಭಗವಾನ್ ಜಗನ್ನಾಥನ ‘ಉಲ್ಟಾ ರಥ ಯಾತ್ರೆ’ ಉತ್ಸವದ ವೇಳೆ ಸಂಜೆ 4.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಹೈಟೆನ್ಷನ್ ತಂತಿ ತಗುಲಿ ದುರಂತ ಸಂಭವಿಸಿತ್ತು.

Written by - Puttaraj K Alur | Last Updated : Jul 6, 2023, 03:10 PM IST
  • ತ್ರಿಪುರಾದ ‘ಉಲ್ಟಾ ರಥ ಯಾತ್ರೆ’ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ
  • ತ್ರಿಪುರಾದ ಕುಮಾರ್‌ಘಾಟ್ ಪಟ್ಟಣದ ಉನಕೋಟಿಯಲ್ಲಿ ಜೂನ್ 28ರಂದು ರಥಕ್ಕೆ ವಿದ್ಯುತ್ ತಂತಿ ತಗುಲಿತ್ತು
  • ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
Tripura Rath Yatra: ತ್ರಿಪುರಾದ ‘ಉಲ್ಟಾ ರಥ ಯಾತ್ರೆ’ ದುರಂತ, ಸಾವಿನ ಸಂಖ್ಯೆ 8ಕ್ಕೇರಿಕೆ! title=
ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ

ಅಗರ್ತಲ: ತ್ರಿಪುರಾದ ‘ಉಲ್ಟಾ ರಥ ಯಾತ್ರೆ’ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ತ್ರಿಪುರಾದ ಕುಮಾರ್‌ಘಾಟ್ ಪಟ್ಟಣದ ಉನಕೋಟಿಯಲ್ಲಿ ಜೂನ್ 28ರಂದು ರಥಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 7 ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದರು.

ಭಗವಾನ್ ಜಗನ್ನಾಥನ ‘ಉಲ್ಟಾ ರಥ ಯಾತ್ರೆ’ ಉತ್ಸವದ ವೇಳೆ ಸಂಜೆ 4.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಹೈಟೆನ್ಷನ್ ತಂತಿ ತಗುಲಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಪೈಕಿ ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದ 40 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8ಕ್ಕೆ ಏರಿದೆ.  

ಇದನ್ನೂ ಓದಿ: ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತರಿಗೆ ಸ್ಕೂಟರ್: ಅಸ್ಸಾಂ ಸರ್ಕಾರದ ಘೋಷಣೆ

‘ಅಗರ್ತಲಾದ ಜಿಬಿ ಪಂತ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಮೂವರ ಪೈಕಿ ರತ್ನಾ ಧರ್ ಅವರು ಇಂದು ಸಾವನ್ನಪ್ಪಿದ್ದಾರೆ ಎಂದು ತ್ರಿಪುರಾ ಪೊಲೀಸ್ ಪಿಆರ್‌ಒ ಜ್ಯೋತಿಷಿಮಾನ್ ದಾಸ್ ಚೌಧರಿ ತಿಳಿಸಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ದುರಂತದ ದಿನ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಘಟನೆಯ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಟ್ಟದ ತನಿಖೆಗೆ ಘೋಷಿಸಿದ್ದರು. ಮತ್ತೊಂದೆಡೆ ಮಾಜಿ ಸಿಎಂ ಮಾಣಿಕ್ ಸರ್ಕಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿದ್ದು, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Watch: ಬುಡಕಟ್ಟು ವ್ಯಕ್ತಿಯ ಪಾದಗಳನ್ನು ತೊಳೆದ ಮಧ್ಯಪ್ರದೇಶದ ಸಿಎಂ ಶಿವರಾಜ್ ಚೌಹಾಣ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News