ಮೈಸೂರು: ಮೈಸೂರಿನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 4.17 ಲಕ್ಷ ರೂ. ಮೌಲ್ಯದ ಸುಮಾರು 12 ಟನ್ 60 ಕೆಜಿಯಷ್ಟು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.   


COMMERCIAL BREAK
SCROLL TO CONTINUE READING

ಅನ್ನಭಾಗ್ಯ ಯೋಜನೆಯಡಿ ಜನರಿಗೆ ವಿತರಿಸಬೇಕಿದ್ದ 12 ಟನ್ 60 ಕೆಜಿ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಮೈಸೂರು-ಬೆಂಗಳೂರು ರಸ್ತೆಯ ಸಿದ್ದಲಿಂಗಪುರ ಬಳಿ ಖರೀದಿ ಸರಕುಪಟ್ಟಿ ಸೇರಿದಂತೆ ಸಮರ್ಪಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಈ ಅಕ್ಕಿಯನ್ನು ಮೈಸೂರಿನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ ಇಂದಿನಿಂದ ಪೀಣ್ಯ ಫ್ಲೈ ಓವರ್‌ ಬಂದ್‌


ಅಕ್ಕಿ ಮತ್ತು ಟ್ರಕ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು, ಚಾಲಕನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


ಖಚಿತ ಮಾಹಿತಿ ಮೇರೆಗೆ ಡಿಸಿಪಿ ಎಸ್.ಜಾಹ್ನವಿ, ಸಿಸಿಬಿ ಎಸಿಪಿ ಎಸ್‍ಎನ್ ಸಂದೇಶ್ ಕುಮಾರ್ ಅವರ ನಿರ್ದೇಶನದಂತೆ ಆಹಾರ ನಿರೀಕ್ಷಕ ಬಿ.ವಿ.ಕಿರಣ್ ಕುಮಾರ್, ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಸಿ.ಪೂವಯ್ಯ, ಪಿಎಸ್ ಐಗಳಾದ ಲೇಪಾಕ್ಷ, ರಾಜು ಕೋಣನಕೇರಿ, ಸಿಬ್ಬಂದಿಗಳಾದ ಮಧುಕುಮಾರ್, ಕೆ.ಜಿ.ಶ್ರೀನಿವಾಸ್, ಮೋಹನ್ ಆರಾಧ್ಯ, ಶಿವಣ್ಣ ಕಾರ್ಯಾಚರಣೆ ನಡೆಸಿದ್ದರು. ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಈ ತಂಡವನ್ನು ಶ್ಲಾಘಿಸಿದ್ದಾರೆ.


ಇದನ್ನೂ ಓದಿ: ಇದೇ ತಿಂಗಳ 19 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಸಾಧ್ಯತೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.