ಬೆಂಗಳೂರು: ಮನೆ ಹೊರಗಡೆ ಇರುವ ಸಿಲಿಂಡರ್‌ ಗಳನ್ನು ಟಾರ್ಗೆಟ್‌ ಮಾಡಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯದೆಲ್ಲೆಡೆ ಅದ್ದೂರಿ ವರ ಮಹಾಲಕ್ಷ್ಮೀ ಹಬ್ಬ ಆಚರಣೆ


ಹೇಮಂತ್ ಹಾಗೂ ಲೋಕೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಅನೇಕ ದಿನಗಳಿಂದ ಇದೇ ರೀತಿಯಾದ ಕೃತ್ಯದಲ್ಲಿ ಆರೋಪಿಗಳು ತೊಡಗಿಕೊಂಡಿದ್ದರು. ಹಗಲು ಹೊತ್ತಲ್ಲಿ ಏರಿಯಾದಲ್ಲಿ ಸುತ್ತಾಡಿ ಸಿಲಿಂಡರ್‌ಗಳನ್ನು ಯಾರು ಮನೆಯ ಹೊರಗೆ ಇಟ್ಟಿದ್ದಾರೆ ಎಂಬುದನ್ನು ಗುರುತು ಮಾಡಿಕೊಳ್ಳುತ್ತಿದ್ದರು.


ಇದನ್ನೂ ಓದಿ: ಅನಧಿಕೃತ ಒಎಪ್‌ಸಿ ಕೇಬಲ್ ತೆರವಿಗೆ ಬೆಸ್ಕಾಂ ಕಟ್ಟು ನಿಟ್ಟಿನ ಕ್ರಮ !


ನಂತರ ರಾತ್ರಿ ಎಲ್ಲರು ಮಲಗಿದ ಮೇಲೆ ಕಳ್ಳ ಬೆಕ್ಕಿನ ರೀತಿ ಹೋಗಿ ಮನೆ ಹೊರಗಡೆ ಅಳವಡಿಸಿದ್ದ ಸಿಲಿಂಡರ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದರು. ನಂತರ ಸಿಲಿಂಡರ್ ಗಳನ್ನ ಪಾನಿಪುರಿ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಈ ಸಂಬಂಧ ಸ್ಥಳೀಯರು ಗೋವಿಂದರಾಜ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಬಂಧಿಸಿ 60 ಸಾವಿರ ಮೌಲ್ಯದ 20 ಸಿಲಿಂಡರ್, ಕೃತ್ಯಕ್ಕೆ ಬಳಸಿದ್ದ ಬೈಕ್ ಸೀಜ್ ಮಾಡಿ ಹೆಚ್ಚಿನ ತನಿಖೆ ನಡೆಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.