ಕೇವಲ 24 ಗಂಟೆಯಲ್ಲಿ ಇಬ್ಬರು ಬಲಿ; ರಾಷ್ಟ್ರೀಯ ಹೆದ್ದಾರಿ ತಡೆದು ಜನರ ಆಕ್ರೋಶ!

Chamarajanagar Road Accident: ಅಪಘಾತ ಆಗುತ್ತಿದ್ದಂತೆ ಪೊಲೀಸ್ ಹಾಗೂ ಆ್ಯಂಬುಲೆನ್ಸ್ ತಡವಾಗಿ ಬಂತೆಂದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇಪದೆ ಅಪಘಾತ ಸಂಭವಿಸುತ್ತಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

Written by - Puttaraj K Alur | Last Updated : Sep 15, 2024, 05:30 PM IST
  • ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
  • ಚಾಮರಾಜನಗರ ತಾಲೂಕಿನ‌ ಅಟ್ಟಗುಳಿಪುರ ಸಮೀಪ ನಡೆದಿರುವ ಘಟನೆ
  • ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ಥಳೀಯರಿಂದ ಆಕ್ರೋಶ
ಕೇವಲ 24 ಗಂಟೆಯಲ್ಲಿ ಇಬ್ಬರು ಬಲಿ; ರಾಷ್ಟ್ರೀಯ ಹೆದ್ದಾರಿ ತಡೆದು ಜನರ ಆಕ್ರೋಶ! title=
ರಾಷ್ಟ್ರೀಯ ಹೆದ್ದಾರಿ ಬಂದ್!

Chamarajanagar: ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ‌ ಅಟ್ಟಗುಳಿಪುರ ಸಮೀಪ ನಡೆದಿದೆ. ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ನಿವಾಸಿ ಪ್ರವೀಣ್(25) ಮೃತ ದುರ್ದೈವಿ. 

ಇವರಿಗೆ ಮದುವೆಯಾಗಿ ಒಂದೂವರೆ ವರ್ಷವಾಗಿದ್ದು, 2 ತಿಂಗಳ ಮಗು ಇದೆ. ಅಪಘಾತ ಸ್ಥಳದಲ್ಲೇ ಮಗುವಿಗೆ ಕೊಂಡೊಯ್ತುತ್ತಿದ್ದ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ತಮಿಳುನಾಡಿನಿಂದ ಬರುತ್ತಿದ್ದ ಬೊಲೆರೊ ವಾಹನ ಚಾಲಕ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಪ್ರವೀಣ್ ಮೃತಪಟ್ಟಿದ್ದಾರೆ. 

ಇದನ್ನೂ ಓದಿ: 'ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ'

ರಾಷ್ಟ್ರೀಯ ಹೆದ್ದಾರಿ ಬಂದ್! 

ಅಪಘಾತ ಆಗುತ್ತಿದ್ದಂತೆ ಪೊಲೀಸ್ ಹಾಗೂ ಆ್ಯಂಬುಲೆನ್ಸ್ ತಡವಾಗಿ ಬಂತೆಂದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇಪದೆ ಅಪಘಾತ ಸಂಭವಿಸುತ್ತಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಯಾವುದೇ ಸೂಚನಾ ಫಲಕಗಳು, ರಸ್ತೆ ಡುಬ್ಬಗಳು, ಜೀಬ್ರಾ ಕ್ರಾಸ್ ಮಾಡಿಲ್ಲ. ವೇಗ ನಿಯಂತ್ರಣಕ್ಕೆ ಯಾವುದೇ ಕ್ರಮ‌ ಕೈಗೊಂಡಿಲ್ಲವೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸರ ವಿರುದ್ಧ ಸ್ಥಳೀಯರು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ತಮಿಳುನಾಡು ಹಾಗೂ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಒಂದು ಗಂಟೆಯಿಂದ ವಾಹನ ಸಂಚಾರ ಬಂದ್ ಆಗಿದೆ‌.

ಇದನ್ನೂ ಓದಿ: ಬಿಜೆಪಿ ಶಾಸಕ ಸುರೇಶ್‌ ಗೌಡನ ತಲೆ ಸರಿ ಇದೆ ಏನ್ರಿ? : ರಾಜಣ್ಣ

ಇದೇ ರಸ್ತೆಯಲ್ಲಿ ರಾತ್ರಿ ಮತ್ತೋರ್ವ ಸಾವು!

ಇದೇ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಹರದನಹಳ್ಳಿ ಬಳಿ ಶನಿವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅಟ್ಟಗುಳಿಪುರದ ಪ್ರಮೋದ್ ಎಂಬವರು ಮೃತಪಟ್ಟಿದ್ದರು. ಈ ಎರಡು ಅಪಘಾತಗಳಿಂದ ಆಕ್ರೋಶಗೊಂಡ ಜನರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News