Haldwani Violence: ಗುರುವಾರ (ಫೆಬ್ರವರಿ 08)  ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದ್ರಸಾ ಮತ್ತು ಪಕ್ಕದ ಮಸೀದಿ ಕೆಡವಿದ್ದಕ್ಕಾಗಿ ಆರಂಭವಾದ ಗಲಾಟೆ ಸದ್ಯ ಹಿಂಸಾಚಾರಕ್ಕೆ ತಿರುಗಿದ್ದು ವ್ಯಾಪಕ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಈ ದುರ್ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಹಲ್ದ್ವಾನಿಯಲ್ಲಿರುವ ಬನ್‌ಭೂಲ್‌ಪುರ ಪ್ರದೇಶದಲ್ಲಿ 'ಕಾನೂನುಬಾಹಿರವಾಗಿ ನಿರ್ಮಿಸಲಾದ' ಮದರಸಾವನ್ನು ಕೆಡವಿದ್ದಕ್ಕಾಗಿ ದುಷ್ಕರ್ಮಿಗಳು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ  ಕರ್ಫ್ಯೂ ಘೋಷಿಸಲಾಗಿದ್ದು, ಗಲಭೆಕೋರರ ವಿರುದ್ಧ ಶೂಟ್-ಆಟ್-ಸೈಟ್ ಆದೇಶಗಳನ್ನು ಹೊರಡಿಸಲಾಗಿದೆ. ಇದಲ್ಲದೆ, ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.


ವಾಸ್ತವವಾಗಿ,  ನ್ಯಾಯಾಲಯದ ಆದೇಶದ ನಂತರ ಪೊಲೀಸರೊಂದಿಗೆ ಸರ್ಕಾರಿ ಅಧಿಕಾರಿಗಳ ತಂಡವು ಕಟ್ಟಡಗಳನ್ನು 'ಕಾನೂನುಬಾಹಿರವಾಗಿ ನಿರ್ಮಿಸಲಾದ' ಮದರಸಾ ಮತ್ತು ಮಸೀದಿಯನ್ನು ನೆಲಸಮಗೊಳಿಸಲು ಪ್ರಯತ್ನಿಸಿದಾಗ ಘರ್ಷಣೆಯು ಹಿಂಸಾಚಾರ ಹಂತವನ್ನು ತಲುಪಿತು. ಇದು ಅವರ ಧ್ವಂಸಕ್ಕೆ ಕಾರಣವಾಯಿತು. ಈ ಹಿಂಸಾಚಾರ ಘಟನೆಯಲ್ಲಿ 50 ಕ್ಕೂ ಹೆಚ್ಚು ಪೊಲೀಸರು ಸೇರಿದಂತೆ ಹಲವಾರು ಆಡಳಿತ ಅಧಿಕಾರಿಗಳು, ಪುರಸಭೆಯ ಕಾರ್ಯಕರ್ತರು ಮತ್ತು ಪತ್ರಕರ್ತರಿಗೂ ಗಾಯಗಳಾಗಿವೆ.  


ಇದನ್ನೂ ಓದಿ- ಸಿಎಂ ಮನೆ ಪಕ್ಕದಲ್ಲೇ ಕೆಜಿಗಟ್ಟಲೇ ಚಿನ್ನ ಕದ್ದ ಕಳ್ಳ


"ಕಾನೂನುಬಾಹಿರವಾಗಿ ನಿರ್ಮಿಸಿದ" ಮದರಸಾ ಮತ್ತು ಪಕ್ಕದ ಮಸೀದಿಯನ್ನು ಕೆಡವಿದ್ದಕ್ಕಾಗಿ ಸ್ಥಳೀಯ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಕಲ್ಲು ತೂರಾಟ ನಡೆಸಿದರು. ನಂತರ ಗುರುವಾರ ಕರ್ಫ್ಯೂ ವಿಧಿಸಲಾಯಿತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದ ಮೇರೆಗೆ ಬಂಬೂಲ್‌ಪುರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಮತ್ತು 'ಗಲಭೆಕೋರರ' ವಿರುದ್ಧ ಶೂಟ್ ಅಟ್ ಸೈಟ್ ಆದೇಶವನ್ನೂ ಹೊರಡಿಸಲಾಗಿದೆ.


ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಎಂ (ನೈನಿತಾಲ್) ವಂದನಾ ಸಿಂಗ್, "ಈ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವುದು ಅಧಿಕಾರಿಗಳ ಪ್ರಾಥಮಿಕ ಗುರಿಯಾಗಿದೆ. ಆಸ್ತಿ ಹಾನಿಯನ್ನು ತಡೆಗಟ್ಟಲು ಮತ್ತು ಯಾವುದೇ ಸಾವುನೋವುಗಳನ್ನು ತಪ್ಪಿಸಲು ಇತರ ವ್ಯವಸ್ಥೆಗಳೊಂದಿಗೆ ಪ್ಯಾರಾ-ಮಿಲಿಟರಿ ಪಡೆಗಳನ್ನು ನಿಯೋಜಿಸಲಾಗುತ್ತಿದೆ" ಎಂದು ತಿಳಿಸಿದ್ದಾರೆ. 


ನಗರದ ಬನ್‌ಭೂಲ್‌ಪುರ ಪ್ರದೇಶದ ಮಲಿಕ್‌ ಕಾ ಬಗೀಚಾದಲ್ಲಿ ನಡೆದ ಹಿಂಸಾಚಾರದ ನಂತರ ಆಸ್ಪತ್ರೆಗೆ ದಾಖಲಾದ ಹೆಚ್ಚಿನವರು ಪೊಲೀಸ್ ಸಿಬ್ಬಂದಿ. ಉಳಿದವರು ಸ್ಥಳೀಯ ಮದರಸಾ ಮತ್ತು ಅದರ ಸಂಕೀರ್ಣದಲ್ಲಿನ ಮಸೀದಿಯ ಕೆಡವುವಿಕೆಯಲ್ಲಿ ಭಾಗಿಯಾಗಿರುವ ಪುರಸಭೆಯ ಕಾರ್ಮಿಕರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ- ಎಂ.ಎಲ್.ಎ. ಲೆಟರ್‌ಪ್ಯಾಡ್ ಗೋಲ್‍ಮಾಲ್!


ಘಟನೆ ವಿವರ: 
ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನಿನಲ್ಲಿ ಮದರಸಾ ಮತ್ತು ಮಸೀದಿ ನಿರ್ಮಿಸಲಾಗಿತ್ತು. ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಪೊಲೀಸರು ಮತ್ತು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಸಿಬ್ಬಂದಿಗಳ ಭಾರೀ ಸಮ್ಮುಖದಲ್ಲಿ ನೆಲಸಮ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ಮೀನಾ ತಿಳಿಸಿದ್ದಾರೆ. 


ಎರಡು ಕಟ್ಟಡಗಳನ್ನು ಕೆಡವಲು ಪ್ರಾರಂಭಿಸುತ್ತಿದ್ದಂತೆ ಕೋಪಗೊಂಡ ನಿವಾಸಿಗಳು, ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದು ಕ್ರಮವನ್ನು ಪ್ರತಿಭಟಿಸಿದರು. ಬ್ಯಾರಿಕೇಡ್‌ಗಳನ್ನು ಮುರಿದು ಧ್ವಂಸ ಮಾಡುವ ಕಾರ್ಯದಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು. 


ಬುಲ್ಡೋಜರ್ ಮದರಸಾ ಮತ್ತು ಮಸೀದಿಯನ್ನು ನೆಲಸಮಗೊಳಿಸಿದ್ದರಿಂದ ಆಕ್ರೋಶಗೊಂಡ ಮಹಿಳೆಯರು ಸೇರಿದಂತೆ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅವರು ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಬಳಿಕ ಪರಿಸ್ಥಿತಿ ಉಲ್ಬಣಗೊಂಡಿತು. ನಂತರ ಜನಸಮೂಹವು ಪೊಲೀಸರು, ಪುರಸಭೆಯ ಕಾರ್ಯಕರ್ತರು ಮತ್ತು ಪತ್ರಕರ್ತರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು. ಇದರ ಪರಿಣಾಮವಾಗಿ ಹಲವರು ಗಾಯಗೊಂಡರೆ, ಆಸ್ತಿಪಾಸ್ತಿಗಳಿಗೆ ಹಾನಿಯಾಯಿತು. 20ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಮತ್ತು ಭದ್ರತಾ ಬಸ್‌ಗೆ ಬೆಂಕಿ ಹಚ್ಚಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.