ಬೆಂಗಳೂರು: ರಸ್ತೆಯಲ್ಲಿ ದಾರಿ ಬಿಡುವಂತೆ ಹಾರ್ನ್ ಮಾಡಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಒಡೆದು ಹಾಕಿದ್ದ ಮೂವರು ಪುಂಡರನ್ನು ಬೆಂಗಳೂರಿನ ವರ್ತೂರು ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಗಣೇಶ್, ರವೀಂದ್ರ ಮತ್ತು ಕೇಶವಮೂರ್ತಿ ಬಂಧಿತ ಆರೋಪಿಗಳು. ಗುರುವಾರ ಮಧ್ಯಾಹ್ನ 2.30ರ ವೇಳೆ ಈ ಘಟನೆ ನಡೆದಿತ್ತು. ವರ್ತೂರು ಬಳಿಯ ರಸ್ತೆಯಲ್ಲಿ ಕಾರಿಗೆ ದಾರಿ ನೀಡದೆ 3-4 ಬೈಕ್ ಸವಾರರು ಅಡ್ಡಾದಿಡ್ಡಿ ಚಾಲನೆ ಮಾಡುತ್ತಿದ್ದರು. ಈ ವೇಳೆ ತಮಗೆ ದಾರಿ ಬಿಡುವಂತೆ ಕಾರು ಚಾಲಕ ಹಾರ್ನ್ ಮಾಡಿದ್ದರು. ಇದರಿಂದ ಕೋಪಗೊಂಡ ಪುಂಡರು ಬೈಕ್‍ಗಳನ್ನು ನಿಲ್ಲಿಸಿ ಬಂದು ಚಾಲಕನ ಜೊತೆಗೆ ಗಲಾಟೆ ಮಾಡಿದ್ದರು. ಈ ಪೈಕಿ ಒಬ್ಬಾತ ತನ್ನ ಬೈಕ್ ತಂದು ಕಾರಿಗೆ ಗುದ್ದಿಸಿದ್ದ.


ಇದನ್ನೂ ಓದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಶಾಕ್!


ಬೆಂಗಳೂರು ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.