ಹುಬ್ಬಳ್ಳಿ: ಮದುವೆ ಮನೆಯಲ್ಲಿ ಮಹಿಳೆಯೊಬ್ಬರ ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಬೆಳಕಿಗೆ ಬಂದಿದೆ. 


COMMERCIAL BREAK
SCROLL TO CONTINUE READING

ಮದುವೆಗೆ ಬಂದಿದ್ದ ಮಹಿಳೆಯೊಬ್ಬರ ಚಿನ್ನಾಭರಣ ದೋಚಿದ ಖದೀಮರು, ಮದುವೆ ಮನೆಯಲ್ಲಿಯೇ ಕೈಚಳಕ ತೋರಿಸಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿ ವಿದ್ಯಾನಗರದ ಲೋಕಪ್ಪನ ಹಕ್ಕಲಿನಲ್ಲಿ ನಡೆದಿದೆ. 


ಇದನ್ನೂ ಓದಿ- Shocking News: ಪತ್ನಿ, ಪುತ್ರ-ಪುತ್ರಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!


ಹೌದು.. ಲೋಕಪ್ಪನ ಹಕ್ಕಲಿನ ಸುಧರ್ಮ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಮದುವೆಯಲ್ಲಿ ಘಟನೆ ಸಂಭವಿಸಿದ್ದು, ರಾಮದುರ್ಗದ ವಿಜಯಲಕ್ಷ್ಮಿ ಮುಚ್ಚಕಂಡಿಮಠ ಅವರ ಚಿನ್ನಾಭರಣ ಕಳ್ಳತನವಾಗಿದೆ.


ಇದನ್ನೂ ಓದಿ- ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪಗೆ ಸೇರಿದ ಅಡಿಕೆ ತೋಟದ ಕಾಪೌಂಡ್ ಬಳಿ ನಡೆದಿತ್ತಾ ವಾಮಾಚಾರ?


ಮದುವೆ ಮನೆಯಲ್ಲಿಯೇ ತಮ್ಮ ಕೈಚಳಕ ತೋರಿಸಿರುವ ಖದೀಮರು  20 ಗ್ರಾಂ ಚಿನ್ನಾಭರಣ, 20 ಗ್ರಾಂ ಬೆಳ್ಳಿಯ ವಸ್ತುಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ವಿಜಯಲಕ್ಷ್ಮಿ ಕುಟುಂಬದವರೊಂದಿಗೆ ಕಲ್ಯಾಣ ಮಂಟಪದ ಕೊಠಡಿಯಲ್ಲಿ ಉಳಿದಿದ್ದ ಸಂದರ್ಭದಲ್ಲಿ ಕೊಠಡಿಯಲ್ಲಿ ಬ್ಯಾಗ್ ಇಟ್ಟು ಹೊರಗೆ ಹೋದಾಗ ಕಳ್ಳತನ ಮಾಡಿದ್ದಾರೆ ಎಂದು ತಿಳಿದುಬಂದಿದೆ.  ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.