'ಕಣ್ಣಾಮುಚ್ಚೆ ಕಾಡೆಗೂಡೆ' : ನಿವೃತ್ತ ವೈದ್ಯನ ಪಾತ್ರದಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್‌

 'Kannamuchche Kaedegude : ನಟರಾಜ್ ಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ  'ಕಣ್ಣಾಮುಚ್ಚೆ ಕಾಡೆಗೂಡೆ' ಸಿನಿಮಾದಲ್ಲಿ  ನಟ ರಾಘವೇಂದ್ರ ರಾಜ್‌ಕುಮಾರ್ ನಿವೃತ್ತ ವೈದ್ಯರಾಗಿ  ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

Written by - Zee Kannada News Desk | Last Updated : Feb 21, 2024, 09:29 PM IST
  • ರಾಘವೇಂದ್ರ ರಾಜ್‌ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಮ್ಮ ಚಿತ್ರದ ಪ್ರಮುಖ ಹೈಲೈಟ್.
  • ಚಿತ್ರದ ಪೋಸ್ಟರ್ ಅನ್ನು ಇತ್ತೀಚೆಗೆ ಸುಕನಂಕ ಚಾರಿಟಬಲ್ ಟ್ರಸ್ಟ್ ಅನಾಥಾಶ್ರಮದಲ್ಲಿ ಬಿಡುಗಡೆ ಮಾಡಲಾಯಿತು.
  • ಈ ಸಿನಿಮಾ ವಿಶೇಷ ಆಸಕ್ತಿದಾಯಕ ಪಾತ್ರಗಳನ್ನು ಒಳಗೊಂಡಿದೆ ಎಂದು ತಿಳಿದು ಬರುತ್ತದೆ.
 'ಕಣ್ಣಾಮುಚ್ಚೆ ಕಾಡೆಗೂಡೆ' : ನಿವೃತ್ತ ವೈದ್ಯನ ಪಾತ್ರದಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್‌ title=

Raghavendra Rajkumar in  'Kannamuchche Kaedegude': ನಟರಾಜ್ ಕೃಷ್ಣ ಅವರ ನಿರ್ದೇಶನದ  'ಕಣ್ಣಾಮುಚ್ಚೆ ಕಾಡೆಗೂಡೆ' ಸಿನಿಮಾ ಆಸಕ್ತಿದಾಯಕ ಪಾತ್ರಗಳನ್ನು ಒಳಗೊಂಡಿದ್ದು, ಈ ಸಿನಿಮಾದಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್ ನಿವೃತ್ತ ವೈದ್ಯರಾಗಿ ಕಾಣಿಸಿಕೊಂಡಿರುವ ಇನ್ನೂ ಹೆಚ್ಚಿನ ಸಂತೋಷವನ್ನು ನೀಡುತ್ತದೆ 

ಕೊಲೆ ರಹಸ್ಯವನ್ನು ಬೇಧಿಸುವ ಕಣ್ಣಾಮುಚ್ಚೆ ಕಾಡೆಗೂಡೆ ಚಿತ್ರದಲ್ಲಿ ನಟರಾಜ್ ಕೃಷ್ಣ ಅವರು ನಟ ರಾಘವೇಂದ್ರ ರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ತೋರಿಸಿದ್ದು, ನಿವೃತ್ತ ವೈದ್ಯರಾಗಿ ನಟಿಸಿದ್ದಾರೆ.

ಇದನ್ನು ಓದಿ : ನುಗ್ಗಿ ಹೊಡೆಯುತ್ತಿದ್ದೇವೆ ಉಗ್ರಗಾಮಿ ಪಾಕ್’ಗೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಗರುಡ ಗಮನ ವೃಷಭ ವಾಹನದಲ್ಲಿ ಖಳನಾಯಕಿಯಾಗಿ ನಟಿಸಿದ್ದ ಜ್ಯೋತಿ ಶೆಟ್ಟಿ, ಮ್ಯಾನ್ ಆಫ್ ದಿ ಮ್ಯಾಚ್‌ನ ಪ್ರಮುಖ ನಾಯಕ ಅಥರ್ವ ಪ್ರಕಾಶ್ ಮತ್ತು ನಿವೃತ್ತ ವೈದ್ಯರಾಗಿ ನಟ ರಾಘವೇಂದ್ರ ರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಈ ಸಿನಿಮಾ ವಿಶೇಷ ಆಸಕ್ತಿದಾಯಕ ಪಾತ್ರಗಳನ್ನು ಒಳಗೊಂಡಿದೆ ಎಂದು ತಿಳಿದು ಬರುತ್ತದೆ. 

ಈಗಾಗಲೇ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮಂಡಳಿ  ಯು/ಎ ಪ್ರಮಾಣಪತ್ರವನ್ನು ನೀಡಿದೆ ಮತ್ತು ಚಿತ್ರೀಕರಣವು ಬೆಂಗಳೂರು ಮತ್ತು ಮಂಗಳೂರಿನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಸಿನಿಮಾವು ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಪೋಸ್ಟರ್ ಅನ್ನು ಇತ್ತೀಚೆಗೆ ಸುಕನಂಕ ಚಾರಿಟಬಲ್ ಟ್ರಸ್ಟ್ ಅನಾಥಾಶ್ರಮದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನು ಓದಿ : ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಿಂದ ಬಿಗ್‌ ಅಪ್‌ಡೇಟ್‌..! 490 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅನಿತಾ ವೀರೇಶ್ ಕುಮಾರ್ ಮತ್ತು ಮೀನಾಕ್ಷಿ ರಾಜಶೇಖರ್ ನಿರ್ಮಾಣದ ಕಣ್ಣಾಮುಚ್ಚೆ ಕಾಡೆಗೂಡೆ ಚಿತ್ರಕ್ಕೆ ದೀಪಕ್ ಕುಮಾರ್ ಜೆಕೆ ಅವರ ಛಾಯಾಗ್ರಹಣ, ಬೇದ್ರೆ ಅವರು ಸಂಕಲನದ ಹೊಣೆ ಹೊತ್ತಿದ್ದಾರೆ. ಚಿತ್ರದಲ್ಲಿ ಪ್ರಾರ್ಥನಾ ನಾಯಕಿಯಾಗಿ ನಟಿಸಿದ್ದು, ವೀರೇಶ್ ಕುಮಾರ್, ಅರವಿಂದ್ ಬೋಳೂರು, ರವಿರಾಮ್ ಕುಂಜ್, ಸುರೇಶ್ ರೈ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

 'ಕಣ್ಣಾಮುಚ್ಚೆ ಕಾಡೆಗೂಡೆ ಚಿತ್ರವು ಸಸ್ಪೆನ್ಸ್ ಥ್ರಿಲ್ಲರ್ ಆಗಿದೆ. ಅಲ್ಲದೆ ಕಮರ್ಷಿಯಲ್ ಅಂಶಗಳನ್ನು ಒಳಗೊಂಡಿದೆ. ರಾಘವೇಂದ್ರ ರಾಜ್‌ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಮ್ಮ ಚಿತ್ರದ ಪ್ರಮುಖ ಹೈಲೈಟ್. ಅವರು ಕಥೆಗೆ ಗಣನೀಯ ಕೊಡುಗೆ ನೀಡಿದ್ದಾರೆ ಮತ್ತು ಹೊಸಬರೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ನಿರ್ದೇಶಕ ನಟರಾಜ್ ಕೃಷ್ಣ  ಈ ಚಿತ್ರದ ಕುರಿತು ಮಾತನಾಡಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ .

Trending News