ಚಿಕ್ಕಮಗಳೂರು.ಮೇ.02 : ​ಬಿಗ್ ಬಾಸ್ ಸ್ಪರ್ಧಿ ಶೈನ್ ಶೆಟ್ಟಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ಅಪರಿಚಿತ ವಾಹನವೊಂದು ಬೀದಿ ನಾಯಿಗೆ ಡಿಕ್ಕಿಯೊಡೆದು ಹೋಗಿದ್ದರು. ಬೀದಿ ನಾಯಿಯ ಕಾಲು, ಕುತ್ತಿಗೆ ಹಾಗೂ ದೇಹಕ್ಕೆ ತೀವ್ರ ಗಾಯವಾಗಿ ರಕ್ತಸ್ರಾವದಿಂದ ರಸ್ತೆ ಬಿದ್ದು ನರಳಾಡುತ್ತಿತ್ತು.


COMMERCIAL BREAK
SCROLL TO CONTINUE READING

ಆಗ ಅದೇ ಮಾರ್ಗದಲ್ಲಿ ಧರ್ಮಸ್ಥಳ ಹೋಗುತ್ತಿದ್ದ ಶೈನ್ ಶೆಟ್ಟಿ ಬೀದಿನಾಯಿಯನ್ನ ಬಣಕಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಆ ನಾಯಿ ಎಲ್ಲಿ ಅಪಘಾತಕ್ಕೀಡಾಗಿ ಬಿದ್ದಿತ್ತೋ ಅಲ್ಲಿಗೆ ಬಿಟ್ಟಿದ್ದಾರೆ. 


ನಾಯಿಯನ್ನ ಆಸ್ಪತ್ರೆಗೆ ಕರೆದೊಯ್ಯುವ ಮುನ್ನ ಸ್ಥಳಿಯರ ಬಳಿ ನಂಬರ್ ತೆಗೆದುಕೊಂಡು ಬಣಕಲ್ ಪಶು ಆಸ್ಪತ್ರೆಯ ವೈದ್ಯ ಅಜೀಜ್ ಅಹಮದ್ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಕೆಲಸ ನಿಮಿತ್ತ ಹಳ್ಳಿಗೆ ಹೋಗಿದ್ದ ಅಜೀಜ್ ಅಹಮದ್ ಕೂಡ ಬಂದಿದ್ದಾರೆ. ಬಂದ ತಕ್ಷಣ ನಾಯಿಗೆ ಚಿಕಿತ್ಸೆ ನೀಡಿ ಅದು ಎಲ್ಲಿ ಬಿದ್ದಿತ್ತೋ ಅಲ್ಲಿಗೆ ಬಿಟ್ಟು ಹೋಗಿದ್ದಾರೆ. ಬಳಿಕ ಎಲ್ಲಾ ವಾಹನ ಸವಾರರಿಗೆ ಮನವಿ ಮಾಡಿದ್ದಾರೆ. ವಾಹನಗಳನ್ನ ಓಡಿಸುವಾಗ ನೋಡಿಕೊಂಡು ಓಡಿಸಿ. 


ಇದನ್ನೂ ಓದಿ-Met Gala 2023: ಪ್ರಿಯಾಂಕಾ ಧರಿಸಿದ ಈ ನೆಕ್‌ಲೇಸ್‌ ಬೆಲೆಗೆ 'ಮನ್ನತ್' ನಂತಹ 2 ಬಂಗಲೆ ಖರೀದಿಸಬಹುದು


ಅಚಾನಕ್ಕಾಗಿ ಅಡ್ಡ ಬಂದರೆ ಏನೂ ಮಾಡಲು ಆಗಲ್ಲ. ಆದರೆ, ನೋಡಿ ವಾಹನ ಚಾಲನೆ ಮಾಡಿ. ಒಂದು ವೇಳೆ ಅಪಘಾತವಾಯಿತು ಎಂದರೆ ಕೂಡಲೇ ಕೆಳಗಡೆ ಇಳಿದು ಪ್ರಾಣಿಯ ಪರಿಸ್ಥಿತಿ ನೋಡಿ. ಚಿಕಿತ್ಸೆ ಕೊಡಿಸಿದರೆ ಬದುಕುತ್ತೆ ಎಂದರೆ ಚಿಕಿತ್ಸೆ ಕೊಡಿಸಿ. ಒಂದು ಜೀವ ಉಳಿಯುತ್ತದೆ ಎಂದು ವಾಹನ ಸವಾರರಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ-Salman Khan: ಐಶ್ವರ್ಯಾ ರೈ ಮೇಲೆ ಸಲ್ಮಾನ್ ಖಾನ್ ಹಲ್ಲೆ ಆರೋಪ.. ಏನಂದ್ರು ಗೊತ್ತಾ ಭಾಯ್‌ಜಾನ್‌?https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇ