ಕಾವೇರಿ ವಿವಾದ : ʼತಲಕಾವೇರಿʼಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್-ಅವಿವಾ..!

ಕಾವೇರಮ್ಮನ ಮೊರೆ ಹೋಗಿರುವ ಅಭಿಷೇಕ್‌ - ಅವಿವಾ ಉತ್ತಮ ಮಳೆಯಾಗಿ ನೀರು ಹಂಚಿಕೆ ವಿವಾದ ಇತ್ಯರ್ಥಗೊಳ್ಳಲಿ ಅಂತ ಪ್ರಾರ್ಥನೆ ಮಾಡಿದ್ದಾರೆ. ಈ ಕುರಿತ ಫೋಟೋಗಳನ್ನ ನಟಿ, ಸಂಸದೆ ಸುಮಲತಾ ಅಂಬರೀಶ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದಾರೆ.  

Written by - Krishna N K | Last Updated : Sep 30, 2023, 05:50 PM IST
  • ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಜೊತೆ ತಲಕಾವೇರಿಗೆ ಭೇಟಿ ನೀಡಿದ್ದಾರೆ.
  • ತಲಕಾವೇರಿಗೆ ಭೇಟಿ ನೀಡಿ, ಕಾವೇರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು.
  • ಸಂಸದೆ ಸುಮಲತಾ ಅವರು ಈ ಕುರಿತ ಫೋಟೋಸ್‌ ಹಂಚಿಕೊಂಡಿದಾರೆ.
ಕಾವೇರಿ ವಿವಾದ : ʼತಲಕಾವೇರಿʼಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್-ಅವಿವಾ..! title=

Abhishek ambareesh - Aaviva : ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚುತ್ತಲೇಯಿದೆ. ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮಳೆ ಆಗದೆ ರೈತರು ಪರದಾಡುವಂತಾಗಿದೆ. ಅಲ್ಲದೆ, ಕುಡಿಯಲು ಸರಿಯಾಗಿ ನೀರು ಇಲ್ಲದೆ ಕರುನಾಡ ಜನ ಸಂಕಷ್ಟಕ್ಕೆ ತುತ್ತಾಗುತ್ತಿದ್ದಾರೆ. ಇದರ ಬೆನ್ನಲ್ಲೆ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಜೊತೆ ತಲಕಾವೇರಿಗೆ ಭೇಟಿ ನೀಡಿ ಕಾವೇರಮ್ಮನ ದರ್ಶನ ಪಡೆದಿದರು.

ಹೌದು.. ಜೂನಿಯರ್‌ ಅಂಬಿ ಪತ್ನಿ ಜೊತೆ ತಲಕಾವೇರಿ ಅಮ್ಮನ ದರ್ಶನ ಪಡೆದಿದ್ದಾರೆ. ನಟ ಅಭಿಷೇಕ್‌ ಮತ್ತು ಅವಿವಾ ಇದೇ ವರ್ಷ ಜೂನ್‌ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಂದು ಈ ಜೋಡಿ ಕಾವೇರಿಯ ಉಗಮ ಸ್ಥಳ ತಲಕಾವೇರಿಗೆ ಭೇಟಿ ನೀಡಿ, ಕಾವೇರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: ಬಿಗ್ ಬಾಸ್‌ ಧ್ವನಿಯ ಹಿಂದಿರುವ ಆ ವ್ಯಕ್ತಿ ಯಾರು ಗೊತ್ತಾ?

ಹಾಗೆಯೇ ಕಾವೇರಿ ನದಿಯ ಪ್ರಾಂತ್ಯದಲ್ಲಿ ಉತ್ತಮ ಮಳೆಯಾಗಿ ಕಾವೇರಿ ಮಡಿಲು ತುಂಬಲಿ ಅಂತ ಪ್ರಾರ್ಥನೆ ಮಾಡಿದ್ದಾರೆ. ಅಭಿ-ಅವಿವಾ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಫೋಟೋಗಳನ್ನ ನಟಿ, ಸಂಸದೆ ಸುಮಲತಾ ಅಂಬರೀಶ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದಾರೆ.  

ರಾಜ್ಯದಲ್ಲಿ ಕಾವೇರಿ ವಿವಾದದ ಕಿಚ್ಚು ಹೆಚ್ಚುತ್ತಲೇಯಿದೆ. ಸುಮಾರು ಆರು ದಶಕದಿಂದಲೂ ತಮಿಳುನಾಡು ಮತ್ತು ಕರ್ನಾಟದ ಮಧ್ಯ ವಿವಾದ ನಡೆಯುತ್ತಲೆಯಿದೆ. ಇಂದಿಗೂ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಈ ವರ್ಷ ಮಳೆಯ ಅಭಾವದಿಂದ ಕೆಆರ್‌ಎಸ್‌ ತುಂಬಿಲ್ಲ, ಆದರೂ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಆದೇಶ ನೀಡಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಈ ವಿಷಯವಾಗಿ ರಾಜ್ಯಾದಂತ ಪ್ರತಿಭಟನೆಯೂ ಸಹ ನಡೆಯುತ್ತಿದೆ. 

ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ತೇಜಸ್ವಿನಿ : ಬೇಬಿ ಬಂಪ್ಸ್ ಫೋಟೋಸ್‌ ಇಲ್ಲಿವೆ

ಈ ಬಾರಿ ಮಳೆ ಕಡಿಮೆಯಾಗಿರುವ ಕಾರಣ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಹಾಗು ಬೆಂಗಳೂರು ಭಾಗದ ಜನರನ್ನು ಸಂಕಷ್ಟ ಎದುರಿಸಬೇಕಾಗಿದೆ. ಸೆಪ್ಟೆಂಬರ್‌ 26ರಂದು ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ, ಕನ್ನಡ ಪರ ಹೋರಾಟಗಾರು ರಾಜ್ಯ ಬಂದ್‌ಗೆ ಕರೆ ನೀಡಿದ್ದರು. ಇದಕ್ಕೆ ಕನ್ನಡ ಸಿನಿರಂಗದ ಕಾಲವಿದರೂ ಬೆಂಬಲ ನೀಡಿದ್ದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News