ನಾಳೆ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಅಂಬರೀಶ್ ಚಿತಾಭಸ್ಮ ವಿಸರ್ಜನೆ

ನಾಳೆ ಬೆಳಗ್ಗೆ ಹಾಲು ತುಪ್ಪ ಬಿಡುವ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹಾಗೆಯೇ ನಾಳೆಯೇ ಅಂಬರೀಶ್ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಬಿಡಲಿದ್ದೇವೆ ಎಂದು ರಾಕ್ ಲೈನ್ ವೆಂಕಟೇಶ್ ಹೇಳಿದರು.

Last Updated : Nov 27, 2018, 05:46 PM IST
ನಾಳೆ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಅಂಬರೀಶ್ ಚಿತಾಭಸ್ಮ ವಿಸರ್ಜನೆ title=

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ನಿಧನರಾದ ಮಾಜಿ ಸಚಿವ, ನಟ ಅಂಬರೀಶ್ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಬುಧವಾರ ವಿಸರ್ಜಿಸಲಾಗುವುದು ಎಂದು ರಾಕ್ ಲೈನ್ ವೆಂಕಟೇಶ್ ತಿಳಿಸಿದ್ದಾರೆ. 

ಸೋಮವಾರ ಸಂಜೆ ಶಾಸ್ತ್ರೋಕ್ತವಾಗಿ ಅಗ್ನಿ ಸ್ಪರ್ಶಕ್ಕೆ ಒಳಗಾದ ಅಂಬರೀಶ್ ಸಮಾಧಿಗೆ ಇಂದು ಹಾಲು ತುಪ್ಪ ಬಿಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಇನ್ನೂ ಚಿತೆ ಉರಿಯುತ್ತಿರುವ ಕಾರಣ ವಿಶೇಷ ಪೂಜೆ ಮಾಡಿ, ನಾಳೆ ಬೆಳಗ್ಗೆ ಹಾಲು ತುಪ್ಪ ಬಿಡುವ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹಾಗೆಯೇ ನಾಳೆಯೇ ಅಂಬರೀಶ್ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಬಿಡಲಿದ್ದೇವೆ ಎಂದು ರಾಕ್ ಲೈನ್ ವೆಂಕಟೇಶ್ ಹೇಳಿದರು.

ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದೊಡ್ಡಣ್ಣ, ಅಂಬರೀಶ್ ನಿಧನದಿಂದ  ಕನ್ನಡ ಚಿತ್ರರಂಗ ಬಡವಾಗಿದೆ‌‌‌ ಎಂದು ಸಂತಾಪ ವ್ಯಕ್ತಪಡಿಸಿದರು. ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾದ ರೆಬಲ್ ಸ್ಟಾರ್ ಅಂಬರೀಶ್​ ಅಂತ್ಯಕ್ರಿಯೆಯನ್ನು ನಿನ್ನೆ ಕಂಠೀರವ ಸ್ಟುಡಿಯೋನಲ್ಲಿ ಗಣ್ಯರ, ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿಸಲಾಗಿತ್ತು.

Trending News