ಅನಿರುದ್ಧ್ ಅಭಿನಯದ 'chef ಚಿದಂಬರ' ಚಿತ್ರಕ್ಕೆ ಭಾರತಿ ವಿಷ್ಣುವರ್ಧನ್, ಉಪೇಂದ್ರ ಚಾಲನೆ

Chef Chidambara Launch: ಈ ಸ್ಥಳಕ್ಕೆ ಬಂದಾಗ ನಮ್ಮ ಯಜಮಾನರ "ಯಜಮಾನ" ಚಿತ್ರದ ಮುಹೂರ್ತ ಸಮಾರಂಭ ನೆನಪಾಯಿತು. ಆ ಚಿತ್ರದ ಮುಹೂರ್ತ ಕೂಡ ಇಲ್ಲೇ ನಡೆದಿತ್ತು. ಈ ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಭಾರತಿ ವಿಷ್ಣುವರ್ಧನ್ ಶುಭಹಾರೈಸಿದರು. ​

Written by - YASHODHA POOJARI | Edited by - Puttaraj K Alur | Last Updated : Aug 11, 2023, 01:27 PM IST
  • ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಆರಂಭವಾಯಿತು ಅನಿರುದ್ಧ್ ಅಭಿನಯದ "chef ಚಿದಂಬರ" ಚಿತ್ರ
  • ಚಿತ್ರದ ಮೊದಲ ಸನ್ನಿವೇಶಕ್ಕೆ ಭಾರತಿ ವಿಷ್ಣುವರ್ಧನ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಚಾಲನೆ
  • 5 ವರ್ಷಗಳ ಬಳಿಕ ಮತ್ತೆ ತೆರೆಮೇಲೆ ಮಿಂಚಲು ಸಜ್ಜಾದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಳಿಯ
ಅನಿರುದ್ಧ್ ಅಭಿನಯದ 'chef ಚಿದಂಬರ' ಚಿತ್ರಕ್ಕೆ ಭಾರತಿ ವಿಷ್ಣುವರ್ಧನ್, ಉಪೇಂದ್ರ ಚಾಲನೆ title=
'chef ಚಿದಂಬರ' ಚಿತ್ರಕ್ಕೆ ಅದ್ದೂರಿ ಚಾಲನೆ

ಬೆಂಗಳೂರು: ಸಾಹಸಸಿಂಹ ಡಾ.ವಿಣ್ಣುವರ್ಧನ್ ಅಳಿಯ, ನಟ ಅನಿರುದ್ಧ್ ನಾಯಕರಾಗಿ ನಟಿಸುತ್ತಿರುವ, ಎಂ.ಆನಂದರಾಜ್ ನಿರ್ದೇಶನದ "ಶೆಫ್ ಚಿದಂಬರ" ಚಿತ್ರದ ಮುಹೂರ್ತ ಸಮಾರಂಭ ಹನುಮಂತನಗರದ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಹಿರಿಯ ನಟಿ‌ ಭಾರತಿ ವಿಷ್ಣುವರ್ಧನ್ ಕ್ಯಾಮೆರಾ ಚಾಲನೆ ನೀಡಿದರು.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್‍ನ ಚಿತ್ರ. ಅನಿರುದ್ಧ್ ಅವರು 5 ವರ್ಷಗಳ ನಂತರ ನಟಿಸುತ್ತಿರುವ ಚಿತ್ರವಿದು. ಇಂದಿನಿಂದ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಆರಂಭವಾಗಲಿದೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ನಟಿಸುತ್ತಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್.ಶ್ರೀಧರ್, ರಘು ರಮಣಕೊಪ್ಪ, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ರೂಪ ಡಿ.ಎನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಬಿ.ಆರ್.ನವೀನ್ ಕುಮಾರ್ ಸೌಂಡ್ ಡಿಸೈನ್ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕವಿರಾಜ್ - ದುನಿಯಾ ವಿಜಯ್ ಕಾಂಬಿನೇಷನ್‌ನಲ್ಲಿ ಬರ್ತಿದೆ ಸ್ಪೆಷಲ್ ಸಾಂಗ್

ನಿರ್ದೇಶಕರು ಹೇಳಿದ ಹಾಗೆ ಇದೊಂದು ಡಾರ್ಕ್ ಕಾಮಿಡಿ ಜಾನರ್‍ನ ಚಿತ್ರ. ಕಾಮಿಡಿಯೊಂದಿಗೆ ಕೌತುಕವು ಇದೆ. ಒಂದು ಕೊಲೆಯ ಸುತ್ತ ಕಥೆ ನಡೆಯುತ್ತದೆ. ನಾನು ಶಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ.‌ ಕಳೆದ ತಿಂಗಳು ಮೈಸೂರಿನ ಡಾ.ವಿಷ್ಣುವರ್ಧನ್ ಸಮಾಧಿ ಬಳಿ ಸ್ಕ್ರಿಪ್ಟ್ ಪೂಜೆ ಮಾಡಲಾಗಿತ್ತು. ಅಂದು ಕೂಡ ಭಾರತಿ ಅಮ್ಮ ಅವರು ಆಗಮಿಸಿದ್ದರು. ಚಿತ್ರದ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ನಿಮ್ಮ ಜೊತೆ ನಾನು ಇದ್ದೀನಿ ಎಂದು ಭರವಸೆ ನೀಡಿದರು. ಮುಹೂರ್ತ ಸಮಾರಂಭಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅವರು ಆಗಮಿಸಿ ಶುಭ ಕೋರಿದರು. ಎಲ್ಲರಿಗೂ ನನ್ನ ಧನ್ಯವಾದ.‌ ನಿರ್ಮಾಪಕಿ ರೂಪ ಅವರ ಪತಿ ಸರ್ವೋತ್ತಮ ಅವರು ನನ್ನ ಸ್ನೇಹಿತರು. ಅವರಿಗೆ ಕಥೆ ಇಷ್ಟವಾಗಿ, ನಿರ್ಮಾಣ‌ ಮಾಡುತ್ತಿದ್ದಾರೆ ಎಂದು ನಟ ಅನಿರುದ್ಧ್ ತಿಳಿಸಿದರು.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು.‌ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕಿ ರೂಪ ಹೇಳಿದರು. ಇದೇ ವೇಳೆ ನಾಯಕಿಯರಾದ ನಿಧಿ ಸುಬ್ಬಯ್ಯ, ರೆಚೆಲ್ ಡೇವಿಡ್, ನಟ ರಘು ರಮಣ ಕೊಪ್ಪ ಹಾಗೂ ಛಾಯಾಗ್ರಹಕ ಉದಯ್ ಲೀಲಾ ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: ಜೈಲರ್‌ ನೋಡಿ ಹ್ಯಾಟ್ರಿಕ್‌ ಹೀರೋಗೆ ಬಹುಪರಾಕ್; ಶಿವಣ್ಣನ ಪಾತ್ರಕ್ಕೆ ತಮಿಳು ಮಂದಿ ರಿಯಾಕ್ಷನ್‌ ಹೇಗಿತ್ತು ಗೊತ್ತಾ..?

ಈ ಸ್ಥಳಕ್ಕೆ ಬಂದಾಗ ನಮ್ಮ ಯಜಮಾನರ "ಯಜಮಾನ" ಚಿತ್ರದ ಮುಹೂರ್ತ ಸಮಾರಂಭ ನೆನಪಾಯಿತು. ಆ ಚಿತ್ರದ ಮುಹೂರ್ತ ಕೂಡ ಇಲ್ಲೇ ನಡೆದಿತ್ತು. ಈ ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಭಾರತಿ ವಿಷ್ಣುವರ್ಧನ್ ಶುಭಹಾರೈಸಿದರು. ಚಿತ್ರದ ಕ್ಯಾರೆಕ್ಟರ್ ಟೀಸರ್ ಉಪೇಂದ್ರ ಬಿಡುಗಡೆ ಮಾಡಿದರು. ಅನಿರುದ್ದ್ ಅವರ ಪತ್ನಿ ಕೀರ್ತಿ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News