Babloo Prithviraj driver : ಬಹುಭಾಷಾ ನಟ ಪೃಥ್ವಿರಾಜ್ ದಕ್ಷಿಣ ಚಿತ್ರರಂಗದಲ್ಲಿ ಹೀರೋ, ವಿಲನ್, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಇಮೇಜ್ ಗಿಟ್ಟಿಸಿಕೊಂಡಿದ್ದರು. ಕನ್ನಡ, ತೆಲುಗು, ತಮಿಳಿನಲ್ಲಿ ಹಲವು ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರಿಗೆ ಹತ್ತಿರವಾದರು. ಆದರೆ ಕಾರಣಾಂತರದಿಂದ ಕೆಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು. ಇದೀಗ ಮತ್ತೆ ಸಿನಿಮಾಗಳಿಗೆ ಎಂಟ್ರಿ ಕೊಡುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಸಧ್ಯ ಸಿನಿಮಾ, ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ತೆರೆಯ ಮೇಲೆ ಸದ್ದು ಮಾಡುತ್ತಿದ್ದಾರೆ. ಇತ್ತೀಚಿಗೆ ತೆರೆಕಂಡ ರಣಬೀರ್‌ ಕಪೂರ್‌ ನಟನೆಯ ಅನಿಮಲ್‌ ಸಿನಿಮಾದಲ್ಲಿಯೂ ಸಹ ಕಾಣಿಸಿಕೊಂಡಿದ್ದರು. ಇದೀಗ ಪೃಥ್ವಿರಾಜ್‌ ಅವರ ಕುರಿತ ವಿಷಯವೊಂದು ಮುನ್ನೆಲೆಗೆ ಬಂದಿದೆ.


ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ಆಶಿಕಾ ರಂಗನಾಥ್...ಯಾವ ಚಿತ್ರ?


‌ಈ ಖ್ಯಾತ ನಟ ಒಮ್ಮೆ ತಮ್ಮ ಡ್ರೈವರ್ ಮಾತು ಕೇಳಿ ನೂರಾರು ಕೋಟಿ ರೂ. ಬೆಲೆ ಬಾಳುವ ಆಸ್ತಿ ಬಿಟ್ಟುಕೊಟ್ಟಿದ್ದರಂತೆ. ಇದನ್ನು ಸ್ವತಃ ಪೃಥ್ವಿರಾಜ್ ಬಹಿರಂಗಪಡಿಸಿದ್ದಾರೆ. ಈ ಹಿಂದೆ ಹೈದ್ರಾಬಾದ್‌ನ ಶಂಶಾಬಾದ್‌ನಲ್ಲಿ ನೂರಾರು ಎಕರೆ ಭೂಮಿಯನ್ನು ಕೇವಲ ಹತ್ತು ಲಕ್ಷಕ್ಕೆ ಮಾರಾಟ ಮಾಡಲಾಗಿತ್ತು. ನಾನು ನನ್ನ ಡ್ರೈವರ್ ಜೊತೆ ಸೈಟ್ ನೋಡಲು ಹೋಗಿದ್ದೆ.. 


ನನಗೆ ಸೈಟ್ ತುಂಬಾ ಇಷ್ಟವಾಯಿತು.. ತಕ್ಷಣ ಅದನ್ನು ಖರೀದಿಸಲು ಮುಂದಾದೆ. ಆದರೆ ನನ್ನ ಡ್ರೈವರ್ ನನ್ನನ್ನು ಪಕ್ಕಕ್ಕೆ ಕರೆದೊಯ್ದು, ಇದು ನಿರುಪಯುಕ್ತ ಜಾಗ.. ಈ ಜಮೀನನ್ನು ಹತ್ತು ಲಕ್ಷ ಕೊಟ್ಟು ಖರೀದಿಸುವುದು ವ್ಯರ್ಥ ಎಂದು ಹೇಳಿದ, ಅದಕ್ಕೆ ನಾನು ಆ ಜಮೀನನ್ನು ಖರೀದಿಸದೆ ಬಿಟ್ಟು ಹೋದೆ.. ಈಗ ಅಲ್ಲಿ, ಶಂಶಾಬಾದ್ ವಿಮಾನ ನಿಲ್ದಾಣ ನಿರ್ಮಾಣವಾಗಿದೆ, ಪ್ರಸ್ತುತ ಆ ಜಮೀನಿನ ಮೌಲ್ಯ ಎಕರೆಗೆ 100 ಕೋಟಿ ರೂ. ಎಂದು ಹೇಳಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.