ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ನಟ ದರ್ಶನ್ ಹಾಗೂ ಗ್ಯಾಂಗ್!

Renuka Swamy Murder Case: ದರ್ಶನ್ ಅಂಡ್ ಗ್ಯಾಂಗ್​ನ ಕ್ರೂರತೆಯ ಬಗ್ಗೆ ತಿಳಿಸಿರುವ ಹಿರಿಯ ವಕೀಲ ಪ್ರಸನ್ನ ಕುಮಾರ್, ʼರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಯಂತ್ರವನ್ನು ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ. 

Written by - Puttaraj K Alur | Last Updated : Jun 16, 2024, 01:25 PM IST
  • ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಕ್ರೂರತ್ವ ಬಯಲಾಗುತ್ತಿದೆ
  • ದರ್ಶನ್ ಅಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿಗೆ ನೀಡಿರುವ ಚಿತ್ರಹಿಂಸೆಯ ಅಂಶ ಬಹಿರಂಗ
  • ರೇಣುಕಾ ಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು
ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ನಟ ದರ್ಶನ್ ಹಾಗೂ ಗ್ಯಾಂಗ್! title=
ರೇಣುಕಾ ಸ್ವಾಮಿಗೆ ಕರೆಂಟ್‌ ಶಾಕ್!

Renuka Swamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಆರೋಪಿಗಳ ಕ್ರೂರತ್ವ ಬಯಲಾಗುತ್ತಿದೆ. ಆರಂಭದಲ್ಲಿ ಭಯಪಡಿಸಲು ಹಲ್ಲೆ ನಡೆಸಿದ ವೇಳೆ ಆತ ಸಾವನ್ನಪ್ಪಿದ್ದಾನೆಂದು ತಿಳಿದಿತ್ತು. ರೇಣುಕಾ ಸ್ವಾಮಿಗೆ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್ ಯಾವ ರೀತಿ ಚಿತ್ರಹಿಂಸೆ ಕೊಟ್ಟಿದ್ದಾರೆ ಅನ್ನೋ ಅಂಶಗಳು ಬಹಿರಂಗವಾಗುತ್ತಿವೆ. ಆತನ ಹತ್ಯೆಯ ವೇಳೆ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳು ನಡೆದುಕೊಂಡಿರುವ ರಾಕ್ಷಸಿ ಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ. 

ದರ್ಶನ್ ಅಂಡ್ ಗ್ಯಾಂಗ್ ಮತ್ತೆ ೯ ದಿನಗಳ ಕಾಲ ವಶಕ್ಕೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನ ಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿದರು. ಈ ವೇಳೆ ರೇಣುಕಾಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಅನ್ನೋ ಶಾಕಿಂಗ್‌ ಮಾಹಿತಿಯನ್ನು ಅವರು ತಿಳಿಸಿದ್ದಾರೆ.  

ಇದನ್ನೂ ಓದಿ: ಮಾಧುರಿ ದೀಕ್ಷಿತ್ ಸೌಂದರ್ಯಕ್ಕೆ ಬೆರಗಾಗಿ ಸಿಗರೇಟ್‌ನಿಂದ ಮುಖ ಸುಟ್ಟುಕೊಂಡಿದ್ದರಂತೆ ಈ ಸೂಪರ್‌ಸ್ಟಾರ್!!

ದರ್ಶನ್ ಅಂಡ್ ಗ್ಯಾಂಗ್​ನ ಕ್ರೂರತೆಯ ಬಗ್ಗೆ ತಿಳಿಸಿರುವ ಹಿರಿಯ ವಕೀಲ ಪ್ರಸನ್ನ ಕುಮಾರ್, ʼರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಯಂತ್ರವನ್ನು ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ. ಮೈಸೂರಿನಲ್ಲಿ ಕೆಲವು ಕಡೆ ಆರೋಪಿಗಳೊಂದಿಗೆ ಮಹಜರು ನಡೆಸಬೇಕಿದೆ. ಆರೋಪಿಯ ಬಟ್ಟೆ ಹಾಗೂ ಚಪ್ಪಲಿಗಳನ್ನು ಸಹ ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ. 

ಕೆಲ ಆರೋಪಿಗಳು ರೇಣುಕಾಸ್ವಾಮಿ ಕೊಲೆಯಾದ ದಿನ ನಡೆದ ಘಟನೆಗಳನ್ನು ಈಗಾಗಲೇ ವಿವರಿಸಿದ್ದು, ಕೆಲವರು ಅಪ್ರೂವರ್ ಆಗಿ ಸಹ ಬದಲಾಗಿದ್ದಾರೆ. ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಹಲ್ಲೆ ಮಾಡಲಾಗಿದೆ, ತೆಳ್ಳಗಿದ್ದ ರೇಣುಕಾಸ್ವಾಮಿಯನ್ನು ಎತ್ತಿ ಗೋಡೆಗೆ ಅಪ್ಪಳಿಸಲಾಗಿದೆ, ಸಿಗರೇಟಿನಿಂದ ಆತನ ದೇಹದ ಮೇಲೆ ಸುಡಲಾಗಿದೆ, ಆತನ ತಲೆಯನ್ನು ಬಲವಾಗಿ ಟ್ಯಾಂಕರ್ ವಾಹನಕ್ಕೆ ಡಿಕ್ಕಿ ಹೊಡೆಸಲಾಗಿದೆ. 

ಇದನ್ನೂ ಓದಿ: Renuka Swamy Murder Case: ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ..!

ಆತ ಸಾವನ್ನಪ್ಪಿದ ಬಳಿಕ ಶೆಡ್​ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಅಮಾಯಕ ಕೂಲಿ ಕೆಲಸದವರನ್ನು ಪುಸಲಾಯಿಸಿ ಹತ್ಯೆ ಆರೋಪವನ್ನು ಒಪ್ಪಿಕೊಳ್ಳುವಂತೆ ಹೇಳಿದ್ದರು. ಇದಕ್ಕೆ ದೊಡ್ಡ ಮೊತ್ತದ ಹಣ ನೀಡುವುದಾಗಿಯೂ ತಿಳಿಸಿದ್ದರು. ಅದರಂತೆ ಆ ಆರೋಪಿಗಳ ಪೊಲೀಸರಿಗೆ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಯಾವಾಗ ರೇಣುಕಾಸ್ವಾಮಿಯ ಮೃತದೇಹ ಪತ್ತೆಯಾಯಿತೋ ಆ ವೇಳೆಯಿಂದಲೇ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ದರ್ಶನ್‌ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News