Actor Darshan case : ಪವಿತ್ರಾ ಪರಪ್ಪನ ಅಗ್ರಹಾರಕ್ಕೆ, ದರ್ಶನ್‌ ಪೊಲೀಸ್‌ ಕಸ್ಟಡಿಗೆ..! ಕೋರ್ಟ್ ಆದೇಶ

Renukaswamy case : ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯನ್ನ ಡಿ ಗ್ಯಾಂಗ್‌ ಹತ್ಯೆ ಮಾಡಿತ್ತು. ಸುದೀರ್ಘ ವಿಚಾರಣೆ ನಂತರ ಪೊಲೀಸರು ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ದರ್ಶನ್‌ ಸೇರಿದಂತೆ 4 ಜನರನ್ನು ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.. ಉಳಿದವರು ಜೈಲು ಪಾಲಾಗಿದ್ದಾರೆ..

Written by - Krishna N K | Last Updated : Jun 20, 2024, 06:33 PM IST
    • ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಹತ್ಯೆ
    • ದರ್ಶನ್‌ ಸೇರಿದಂತೆ 4 ಜನರನ್ನು ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ
    • ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 17 ಜನರನ್ನು ಪೊಲೀಸರು ಬಂಧಿಸಿದ್ದಾರೆ.
Actor Darshan case : ಪವಿತ್ರಾ ಪರಪ್ಪನ ಅಗ್ರಹಾರಕ್ಕೆ, ದರ್ಶನ್‌ ಪೊಲೀಸ್‌ ಕಸ್ಟಡಿಗೆ..! ಕೋರ್ಟ್ ಆದೇಶ title=
Darshan, Pavithra gowda, Renukaswamy,

Darshan case judgement : ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿ ನಟ ದರ್ಶನ್, ಧನರಾಜ್, ವಿನಯ್, ಪ್ರದೋಶ್ ಸೇರಿದಂತೆ ಈ ನಾಲ್ಕು ಜನರನ್ನು 2 ದಿನ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

ಹೌದು.. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy murder case) ಸಂಬಂಧಿಸಿ ಒಟ್ಟು 17 ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಟ ದರ್ಶನ್​, (Actor Darshan) ನಟಿ ಪವಿತ್ರಾ ಗೌಡ ಸೇರಿದಂತೆ ಪವನ್​, ವಿನಯ್​, ಪ್ರದೋಶ್‌, ನಾಗರಾಜ್‌, ಲಕ್ಷ್ಮಣ್‌ ಮುಂತಾದವರು ಪ್ರಮುಖ ಆರೋಪಿಗಳು.

ಇದನ್ನೂ ಓದಿ:ಆ ಭಾಗವನ್ನು ಬಾಡಿಗಾರ್ಡ್ ಅಸಭ್ಯವಾಗಿ ಮುಟ್ಟಿದ..! ಕಹಿ ಅನುಭವ ಹಂಚಿಕೊಂಡ ಸ್ಟಾರ್‌ ನಟಿ

ಇಂದು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಪವಿತ್ರಾ ಗೌಡ (Pavithra Gowda) ಸೇರಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ನಾಲ್ಕು ಜನರನ್ನು ಹೊರತು ಪಡಿಸಿ ಡಿ ಗ್ಯಾಂಗ್‌ ಜುಲೈ 10ರವರೆಗೆ ಜೈಲಿನಲ್ಲಿರಲಿದೆ.

ಇನ್ನು ಈ ಕುರಿತು ದರ್ಶನ್‌ ಪರ ವಕೀಲ ರಂಗನಾಥ ಹೇಳಿಕೆ ನೀಡಿದ್ದು, ಈ ಪ್ರಕರಣದಲ್ಲಿ ಪೊಲೀಸರು ಪ್ರತ್ಯಕ್ಷ ಸಾಕ್ಷಿ ಇದೆ ಎಂದು ವಾದ ಮಂಡಿಸಿದ್ದಾರೆ, ಇಷ್ಡೂ ದಿನ ಇಲ್ಲದ ಪ್ರತ್ಯಕ್ಷ ಸಾಕ್ಷಿ ಇದೀಗ ಇದೆ ಅಂತ ಹೇಳುತ್ತಿದ್ದಾರೆ. ಪ್ರತ್ಯಕ್ಷ ಸಾಕ್ಷಿ ಇದೆ ಎನ್ನುವ ಕಾರಣ ಕೊಟ್ಟು ಕಸ್ಟಡಿಗೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಧಾರಾವಾಹಿ ಶೂಟಿಂಗ್‌ ವೇಳೆ ಅಪಘಾತ..! ಖ್ಯಾತ ನಟಿಗೆ ಗಂಭೀರ ಗಾಯ..

ಅಲ್ಲದೆ, 30 ಲಕ್ಷ ಹಣ ರಿಕವರಿ ಮಾಡಿರೋ ಕಾರಣ ಕೊಟ್ಟು ಪೊಲೀಸರು ಕಸ್ಟಡಿಗೆ ಕೇಳಿದ್ದಾರೆ. ಪ್ರವೀಣ್ ಬುರ್ಖಾ ವರ್ಸರ್ ಹೈ ಕೋರ್ಟ್ ಅಫ್ ಡೆಲ್ಲಿ ಕೇಸ್ ಉಲ್ಲೇಖ ಮಾಡಿ ನಾವು ವಾದ ಮಾಡಿದ್ವಿ, ಈಗ ಹೊಸದಾಗಿ ಉಲ್ಲೇಖ ಮಾಡಿರುವ ಪ್ರತ್ಯಕ್ಷ ಸಾಕ್ಷಿಗಳ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದೆ, ಈ ಎರಡು ದಿನಗಳ ಕಸ್ಟಡಿ ಮುಗಿದ ಬಳಿಕ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತೇವೆ ಎಂದು ದರ್ಶನ್ ಪರ ವಕೀಲ ರಂಗನಾಥ್ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News