Kaatera Review : ‘ಕಾಟೇರ’ನಿಗೆ ವಿಜಯಲಕ್ಷ್ಮಿ ದರ್ಶನ್‌ ಫಿದಾ..! ಪತಿ ಸಿನಿಮಾ ಬಗ್ಗೆ ಹೇಳಿದ್ದಿಷ್ಟು

Vijayalakshmi Darshan on Kaatera : ಬಹುನಿರೀಕ್ಷಿತ ಕಾಟೇರ ಸಿನಿಮಾ ಭರ್ಜರಿಯಾಗಿ ತೆರೆಕಂಡಿದೆ. ರಿಲೀಸ್ ಗೂ ಮುನ್ನ ಸಿಕ್ಕಾಪಟ್ಟೆ ಸದ್ದು ಮಾಡಿದ ಕಾಟೇರನಿಗೆ ಉತ್ತಮ ಸ್ವಾಗತ ಸಿಕ್ಕಿದೆ. ನೆನ್ನೆ ಮಧ್ಯರಾತ್ರಿಯಿಂದ ಶೋ ಪ್ರಾರಂಭವಾಗಿದ್ದು, ಎಲ್ಲಾ ಚಿತ್ರಮಂದಿರಗಳು ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿವೆ. ಇದೀಗ ಪತಿ ಸಿನಿಮಾ ನೋಡಿ ವಿಜಯಲಕ್ಷ್ಮಿ ದರ್ಶನ್‌ ಪ್ರತಿಕ್ರಿಯೆ ನೀಡಿದ್ದಾರೆ.

Written by - Krishna N K | Last Updated : Dec 29, 2023, 11:28 AM IST
  • ಬಹುನಿರೀಕ್ಷಿತ ಕಾಟೇರ ಸಿನಿಮಾ ಭರ್ಜರಿಯಾಗಿ ತೆರೆಕಂಡಿದೆ.
  • ಪತಿ ಸಿನಿಮಾ ನೋಡಿ ವಿಜಯಲಕ್ಷ್ಮಿ ದರ್ಶನ್‌ ಪ್ರತಿಕ್ರಿಯೆ ನೀಡಿದ್ದಾರೆ.
  • ಕಾಟೇರ ಚಿತ್ರಮಂದಿರಗಳು ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿವೆ.
Kaatera Review : ‘ಕಾಟೇರ’ನಿಗೆ ವಿಜಯಲಕ್ಷ್ಮಿ ದರ್ಶನ್‌ ಫಿದಾ..! ಪತಿ ಸಿನಿಮಾ ಬಗ್ಗೆ ಹೇಳಿದ್ದಿಷ್ಟು title=

Kaatera review : ಸ್ಯಾಂಡಲ್‌ವುಡ್‌ ಚಾಲೆಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹುನಿರೀಕ್ಷಿತ ಸಿನಿಮಾ ಕಾಟೇರ ತೆರೆ ಕಂಡಿದ್ದು, ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಮೊದಲ ಶೋನಿಂದಲೇ ದಚ್ಚು ಸಿನಿಮಾ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ಯಾನ್‌ ಇಂಡಿಯಾ ಸಿನಿಮಾಗಳ ನಡುವೆ ಡಿಬಾಸ್‌ ಘರ್ಜನೆ ಜೋರಾಗುವ ನಿರೀಕ್ಷೆ ಇದೆ.

ಇದರ ನಡುವೆ ಕಾಟೇರ ಸಿನಿಮಾವನ್ನು ವೀಕ್ಷಿಸಿರುವ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಯವರು, ಚಿತ್ರದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ʼಕಾಟೇರʼನನ್ನು ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ: 'ಕಾಟೇರ' ವೀರನಾಗಿ ಘರ್ಜಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್. . ಕಾಟೇರನ ನರ್ತನಕ್ಕೆ ಸಿಕ್ತು ಭರ್ಜರಿ ಗೆಲುವು

ಈಗಷ್ಟೇ ನಾನು "ಕಾಟೇರ" ಸಿನಿಮಾ ವೀಕ್ಷಿಸಿದೆ, ಸಿನಿಮಾ ಅದ್ಭುತವಾಗಿದೆ. ಅನೇಕ ದೃಶ್ಯಗಳನ್ನು ನೋಡಿ ನಾನು ಕಣ್ಣೀರು ಹಾಕಿದ್ದೇನೆ, ಸಿನಿಮಾ ನೋಡಿ ನಾನು ಹೊರನಡೆಯುತ್ತಿದ್ದಂತೆ ದರ್ಶನ್ ಅವರ ಶ್ರಮದ ಬಗ್ಗೆ ಹೆಮ್ಮೆ ಮತ್ತು ಗೌರವ ಹೆಚ್ಚಾಯಿತು. ತರುಣ್, "ಕಾಟೇರ" ನಿಮ್ಮ ಅತ್ಯುತ್ತಮ ಚಿತ್ರ ಎಂದು ಹಾಡಿ ಹೊಗಳಿದ್ದಾರೆ.

ಅಲ್ಲದೆ, ಕಾಟೇರ ನನ್ನ ಅಚ್ಚುಮೆಚ್ಚಿನ ಸಿನಿಮಾ, ಇಂತಹ ಸಿನಿಮಾವನ್ನು ದರ್ಶನ್ ಫ್ಯಾನ್ಸ್‌ಗೆ ತೋರಿಸಲು ಕಾತರದಿಂದ ಕಾಯುತ್ತಿದ್ದೇನೆ. ನಿಜಕ್ಕೂ ಈ ಸಿನಿಮಾ ಮಾಸ್ಟರ್‌ಪೀಸ್ ಎಂದು ವಿಜಯಲಕ್ಷ್ಮಿ ಅವರು ಇಡೀ ತಂಡಕ್ಕೆ ಶುಭಹಾರೈಸಿದ್ದಾರೆ. ಆರಾಧನಾ ರಾಮ್, ದರ್ಶನ್ ಸಹೋದರಿ ಮಗ ಚಂದ್ರ ಕುಮಾರ್, ಕುಟುಂಬದ ಆಪ್ತ ಸೂರಜ್‌ಗೆ ಬೆಸ್ಟ್‌ ವಿಶ್‌ ತಿಳಿಸಿದ್ದಾರೆ.

ಇದನ್ನೂ ಓದಿ: 40 ರಲ್ಲೂ ತ್ರಿಶಾ 18 ರಂತೆ ಕಂಗೊಳಿಸಲು ಕಾರಣ ಅವರು ʼಆ ಕೆಲಸʼ ಮಾಡಲ್ವಂತೆ..!

ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಸಿನಿಮಾದಲ್ಲಿ ದರ್ಶನ್‌ಗೆ ಜೊತೆಯಾಗಿ ಮೊದಲ ಬಾರಿಗೆ ನಟಿ ಮಾಲಾಶ್ರೀ ಮಗಳು ಆರಾಧನಾ ರಾಮ್‌ ನಟಿಸಿದ್ದಾರೆ. ಚಿತ್ರಕ್ಕೆ ತರುಣ್‌ ಸುಧೀರ್‌ ಆಕ್ಷನ್‌ ಕಟ್‌ ಹೇಳಿದ್ದು, ವಿ. ಹರಿಕೃಷ್ಣ ಸಂಗೀತ ನಿರ್ದೇಶನವಿದೆ. ಇಂದು ತೆರೆಕಂಡ ಸಿನಿಮಾಗೆ ಮುಂದಿನ ದಿನಗಳಲ್ಲಿ ಹೇಗೆ ರೆಸ್ಪಾನ್ಸ್ ಸಿಗಲಿದೆ ಎಂಬುದನ್ನ ಕಾಯ್ದು ನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News