ನಟ ಕಿಚ್ಚ ಸುದೀಪ್-ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಡಾ.ವಿಷ್ಣು ಪುಣ್ಯಭೂಮಿ ಘೋಷಣೆಗೆ ಮನವಿ ಸಲ್ಲಿಸಿದ ಕಿಚ್ಚ.

Last Updated : Dec 11, 2017, 03:47 PM IST
  • ಸುಮಾರು 40-45 ನಿಮಿಷಗಳ ಕಾಲ ಚರ್ಚೆ ನಡೆಸಿದ ಸುದೀಪ್-ಸಿದ್ದರಾಮಯ್ಯ.
  • ನಟಿ ಭಾರತಿ ಅವರ ಇಚ್ಚೆಯಂತೆ ವಿಷ್ಣು ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಿ.
  • ಅಭಿಮಾನ್ ಸ್ಟುಡಿಯೋ ಜಾಗವನ್ನು ಡಾ. ವಿಷ್ಣು ಪುಣ್ಯಭೂಮಿ ಎಂದು ಘೋಷಿಸಿ.
ನಟ ಕಿಚ್ಚ ಸುದೀಪ್-ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ  title=

ಬೆಂಗಳೂರು: ನಟ ಕಿಚ್ಚ ಸುದೀಪ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು 40-45 ನಿಮಿಷಗಳ ಕಾಲ ಚರ್ಚೆ ನಡೆಸಿ, ಅಭಿಮಾನ್ ಸ್ಟುಡಿಯೋ ಜಾಗವನ್ನು ಡಾ. ವಿಷ್ಣು ಪುಣ್ಯಭೂಮಿಯಾಗಿ ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಸಿಎಂ ಭೇಟಿ ಸಂದರ್ಭದಲ್ಲಿ ವಿಷ್ಣು ಸ್ಮಾರಕದ ಬಗ್ಗೆ ಸಮಾಲೋಚನೆ ನಡೆಸಿರುವ ಸುದೀಪ್, ನಟಿ ಭಾರತಿ ಅವರ ಇಚ್ಚೆಯಂತೆ ವಿಷ್ಣು ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಿ. ಆದರೆ, ಅವರ ಅಂತ್ಯ ಸಂಸ್ಕಾರ ನಡೆದ ಅಭಿಮಾನ್ ಸ್ಟುಡಿಯೋ ಜಾಗವನ್ನು ಡಾ. ವಿಷ್ಣು ಪುಣ್ಯಭೂಮಿ ಎಂದು ಘೋಷಿಸಿ, ಅದನ್ನು ಅಭಿವೃದ್ಧಿ ಪಡಿಸುವಂತೆ ಕಿಚ್ಚ ಸಿಎಂ ಬಳಿ ಮನವಿ ಮಾಡಿದ್ದಾರೆ.

ಸುದೀಪ್ ಅವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ ಎನ್ನಲಾಗಿದೆ.

Trending News