ಖ್ಯಾತ ನಟ ಶರತ್ ಬಾಬು ಆರೋಗ್ಯವಾಗಿದ್ದಾರೆ.. ಸುಳ್ಳು ಸುದ್ದಿ ಹಬ್ಬಿಸಬೇಡಿ..!

Sharath babu Death news : ಸೋಷಿಯಲ್‌ ಮೀಡಿಯಾದಲ್ಲಿ ನಟ ಶರತ್‌ ಬಾಬು ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ವಾಸ್ತವವಾಗಿ ಅವರು ಆರೋಗ್ಯವಾಗಿದ್ದು, ಚಿಕಿತ್ರೆ ಪಡೆಯುತ್ತಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಆದರೆ ಈ ಬಗ್ಗೆ ವೈದ್ಯರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಶರತ್ ಬಾಬು ಅವರ ಸಹೋದರಿ ಅವರ ಆರೋಗ್ಯ ಸ್ಥಿತಿ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. 

Written by - Krishna N K | Last Updated : May 3, 2023, 09:48 PM IST
  • ಖ್ಯಾತ ನಟ ಶರತ್ ಬಾಬು ಆರೋಗ್ಯವಾಗಿದ್ದಾರೆ.
  • ಸುಳ್ಳು ಸುದ್ದಿ ಹಬ್ಬಿಸದಂತೆ ಶರತ್‌ ಬಾಬು ಸಹೋದರಿ ಮನವಿ.
  • ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ ನಟ ಶರತ್‌ ಕುಟುಂಬ.
ಖ್ಯಾತ ನಟ ಶರತ್ ಬಾಬು ಆರೋಗ್ಯವಾಗಿದ್ದಾರೆ.. ಸುಳ್ಳು ಸುದ್ದಿ ಹಬ್ಬಿಸಬೇಡಿ..! title=

Sharath babu Health : ಖ್ಯಾತ ನಟ ಶರತ್ ಬಾಬು ಕೂಡ ಇಹಲೋಕ ನಿಧನರಾಗಿದ್ದಾರೆ ಎಂಬ ಸುದ್ದಿಯೊಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಸುದ್ದಿ ಸಿನಿಪ್ರೇಮಿಗಳೆಲ್ಲರಿಗೂ ದುಃಖ ತಂದಿದೆ. ವಾಸ್ತವವಾಗಿ, ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಪ್ರಸ್ತುತ ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಹೌದು.. ಸೋಷಿಯಲ್‌ ಮೀಡಿಯಾದಲ್ಲಿ ನಟ ಶರತ್‌ ಬಾಬು ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ವಾಸ್ತವವಾಗಿ ಅವರು ಆರೋಗ್ಯವಾಗಿದ್ದು, ಚಿಕಿತ್ರೆ ಪಡೆಯುತ್ತಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಆದರೆ ಈ ಬಗ್ಗೆ ವೈದ್ಯರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಶರತ್ ಬಾಬು ಅವರ ಸಹೋದರಿ ಅವರ ಆರೋಗ್ಯ ಸ್ಥಿತಿ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಶರತ್ ಬಾಬು ಅವರ ಬಗ್ಗೆ ಎಲ್ಲಾ ಸುದ್ದಿಗಳು ತಪ್ಪಾಗಿ ಬರುತ್ತಿದ್ದು, ಅವುಗಳನ್ನು ನಂಬಬೇಡಿ ಎಂದಿದ್ದಾರೆ.

ಇದನ್ನೂ ಓದಿ: ಖ್ಯಾತ ನಟ ಶರತ್ ಬಾಬು ಆರೋಗ್ಯವಾಗಿದ್ದಾರೆ.. ಸುಳ್ಳು ಸುದ್ದಿ ಹಬ್ಬಿಸಬೇಡಿ..!

ಅಲ್ಲದೆ, ಶರತ್ ಬಾಬು ಸ್ವಲ್ಪ ಚೇತರಿಸಿಕೊಂಡಿದ್ದಾರೆ. ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಿ ಮಾಧ್ಯಮಗಳೊಂದಿಗೆ ಮಾತನಾಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ, ಸಾಮಾಜಿಕ ಮಾಧ್ಯಮಗಳಲ್ಲಿನ ಪ್ರಸಾರವಾಗುತ್ತಿರುವ ಸುದ್ದಿಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ. ಶರತ್ ಬಾಬು ಅವರ ಅರೋಗ್ಯ ಸುಧಾರಣೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಸದ್ಯ ಶರತ್ ಬಾಬು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ದೊಡ್ಡ ಮಟ್ಟದ ಪ್ರಚಾರ ಪಡೆಯುತ್ತಿದೆ. ರೆಸ್ಟ್ ಇನ್ ಪೀಸ್ ಶರತ್ ಬಾಬು ಅಂತ ಸಾಮಾಜಿಕ ಜಾಲತಾಣಗಳಲ್ಲೂ ಹ್ಯಾಷ್‌ ಟ್ಯಾಗ್‌ ಟ್ರೆಂಡ್ ಆಗುತ್ತಿದೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು, ಆದರೆ ಅವರು ಚೇತರಿಸಿಕೊಂಡ ನಂತರ ಕೊಠಡಿಗೆ ಸ್ಥಳಾಂತರಿಸಲಾಯಿತು. ಹಾಗಾಗಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿದೆ ಎಂದು ತಿಳಿದು ಬಂದಿದೆ.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News