Yash meet deceased fans family: ರಾಕಿಂಗ್‌ ಸ್ಟಾರ್‌ ಯಶ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಆದರೆ ಯಶ್‌ ಬರ್ತ್‌ಡೇ ದಿನವೇ ದುರ್ಘಟನೆಯೊಂದು ಜರುಗಿದೆ. ರಾಕಿಭಾಯ್‌ ಹುಟ್ಟು ಹಬ್ಬದ ಆಚರಣೆಗೆಂದು ಕಟೌಟ್ ನಿಲ್ಲಿಸುವ ವೇಳೆ ಬಹುದೊಡ್ಡ ಅನಾಹುತ ಸಂಭವಿಸಿದೆ. 


COMMERCIAL BREAK
SCROLL TO CONTINUE READING

ಯಶ್ ಕಟೌಟ್ ನಿಲ್ಲಿಸಲು ಹೋಗಿ ಮೂರು ಜನ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ವಿದ್ಯುತ್‌ ತಂತಿ ತಗುಲಿ ಹನಂಮತ, ಮುರಳಿ, ನವೀನ ಎಂಬ ಮೂವರು ಯುವಕರು ಮೃತಪಟ್ಟಿದ್ದಾರೆ.


ಇದನ್ನೂ ಓದಿ: ರಾಕಿಂಗ್ ಸ್ಟಾರ್‌ ಹುಟ್ಟುಹಬ್ಬದಂದೇ ದುರಂತ: ಯಶ್‌ ಬ್ಯಾನರ್‌ ಕಟ್ಟುವಾಗ 3 ಅಭಿಮಾನಿಗಳ ಸಾವು! 


ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಯುವಕರು ಮಧ್ಯರಾತ್ರಿ 12 ಕ್ಕೆ ಯಶ್ ಕಟೌಟ್‌ ನಿಲ್ಲಿಸಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಇಂದು ನಟ ರಾಕಿಂಗ್ ಸ್ಟಾರ್ ಯಶ್ ಲಕ್ಷ್ಮೇಶ್ವರಕ್ಕೆ ಭೇಟಿ ಕೊಡಲಿದ್ದಾರೆ.


ನಟ ಯಶ್‌ 3 ಗಂಟೆಗೆ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬರಲಿದ್ದಾರೆ. ಅಲ್ಲಿಂದ 4 ಗಂಟೆಗೆ ರಸ್ತೆ ಮಾರ್ಗವಾಗಿ ಲಕ್ಷ್ಮೇಶ್ವರಕ್ಕೆ ತೆರಳಲಿದ್ದಾರೆ. ಬಳಿಕ ಸೂರಣಗಿ ಗ್ರಾಮದ ಮೃತ ಅಭಿಮಾನಿಗಳ ಮನೆಗೆ ಭೇಟಿ ಕೊಡಲಿದ್ದಾರೆ ಎಂದು ತಿಳಿದುಬಂದಿದೆ. 


ಇದನ್ನೂ ಓದಿ: ಹುಟ್ಟು ಹಬ್ಬದ ಸಂಭ್ರಮದಲ್ಲಿ ಟಾಕ್ಸಿಕ್‌ ನಟ..! ‘ಕೆಜಿಎಫ್’ ಕ್ಯಾಪ್ಟನ್‌ಗೆ ಏಜ್‌ ಏಷ್ಟು ಗೊತ್ತಾ? 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.