ಏಪ್ರಿಲ್ 11ಕ್ಕೆ ಹೇಮಂತ್ ರಾವ್ ನಿರ್ಮಾಣದ ರಂಗಾಯಣ ರಘು ನಟನೆಯ 'ಅಜ್ಞಾತವಾಸಿ' ಸಿನಿಮಾ ರಿಲೀಸ್

Agnathavasa Movie: ಕವಲುದಾರಿ, ಗೋಧಿಬಣ್ಣ ಸಾಧಾರಣ ಮೈಕಟ್ಟು ಹಾಗೂ ಸಪ್ತ ಸಾಗರದಾಚೆ ಎಲ್ಲೋ ಸರಣಿ ಸಿನಿಮಾಗಳ ಸಾರಥಿ ಹೇಮಂತ್ ರಾವ್ ನಿರ್ಮಾಣದ ಬಹುನಿರೀಕ್ಷಿತ ಚಿತ್ರ ಅಜ್ಞಾತವಾಸಿ.

Written by - YASHODHA POOJARI | Edited by - Zee Kannada News Desk | Last Updated : Mar 2, 2025, 03:37 PM IST
  • ಏಪ್ರಿಲ್ 11ಕ್ಕೆ ಅಜ್ಞಾತವಾಸಿ ಸಿನಿಮಾ ಬಿಡುಗಡೆ
  • 'ಅಜ್ಞಾತವಾಸಿ' ಬಿಡುಗಡೆಗೆ ದಿನಾಂಕ ನಿಗದಿ... ಏ.11ಕ್ಕೆ ರಂಗಾಯಣ ರಘು ಚಿತ್ರ ರಿಲೀಸ್
ಏಪ್ರಿಲ್ 11ಕ್ಕೆ ಹೇಮಂತ್ ರಾವ್ ನಿರ್ಮಾಣದ ರಂಗಾಯಣ ರಘು ನಟನೆಯ 'ಅಜ್ಞಾತವಾಸಿ' ಸಿನಿಮಾ ರಿಲೀಸ್

Agnathavasa Movie: ಕವಲುದಾರಿ, ಗೋಧಿಬಣ್ಣ ಸಾಧಾರಣ ಮೈಕಟ್ಟು ಹಾಗೂ ಸಪ್ತ ಸಾಗರದಾಚೆ ಎಲ್ಲೋ ಸರಣಿ ಸಿನಿಮಾಗಳ ಸಾರಥಿ ಹೇಮಂತ್ ರಾವ್ ನಿರ್ಮಾಣದ ಬಹುನಿರೀಕ್ಷಿತ ಚಿತ್ರ ಅಜ್ಞಾತವಾಸಿ. 'ಗುಳ್ಟು' ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿರುವ ಅಜ್ಞಾತವಾಸಿ ಟೀಸರ್ ಈಗಾಗಲೇ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ಇದೀಗ ಚಿತ್ರತಂಡ ಸಿನಿಮಾವನ್ನು ಬೆಳ್ಳಿತೆರೆಗೆ ತರಲು ಸಜ್ಜಾಗಿದೆ. ಅದರಂತೆ ಅಜ್ಣಾತವಾಸಿ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 11ಕ್ಕೆ ರಾಜ್ಯಾದ್ಯಂತ ಅಜ್ಞಾತವಾಸಿ ಅಬ್ಬರ ಶುರುವಾಗಲಿದೆ. 

Add Zee News as a Preferred Source

ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ.

ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭರತ್ ಎಂ.ಸಿ ಸಂಕಲನಕಾರರಾಗಿ, ಉಲ್ಲಾಸ್ ಹೈದೂರು ಕಲಾ ನಿರ್ದೇಶಕರಾಗಿ ಅಜ್ಞಾತವಾಸಿ ಚಿತ್ರದಲ್ಲಿ ಕಾರ್ಯನಿರ್ವಾಹಿಸಿದ್ದಾರೆ. ಎನ್ ಹರಿಕೃಷ್ಣ ಸಹ ನಿರ್ದೇಶಕರಾಗಿ ದುಡಿದಿದ್ದು, ಜಿ.ಬಿ.ಭರತ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. 

ಮಾರ್ಚ್ ನಲ್ಲಿ ಹಾಡುಗಳ ಅಬ್ಬರ

ಅಜ್ಞಾತವಾಸಿ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಮಾಡುತ್ತಿದ್ದಂತೆ ಚಿತ್ರತಂಡ ಪ್ರಚಾರಕ್ಕೆ ಭರ್ಜರಿ ಪ್ಲಾನ್ ಮಾಡಿಕೊಂಡಿದೆ. ಮಾರ್ಚ್ ತಿಂಗಳಲ್ಲಿ ಹಾಡುಗಳ ಮೂಲಕ ಸಿನಿಮಾ ಪ್ರೇಮಿಗಳಿಗೆ ಅಜ್ಞಾತವಾಸಿ ಬಳಗ ಆಹ್ವಾನ ಕೊಡಲಿದೆ.

ತಾಯಿ ಹೆಸ್ರಲ್ಲಿ ಹೇಮಂತ್ ರಾವ್ ನಿರ್ಮಾಣ ಸಂಸ್ಥೆ

ಹಂಬಲ್ ಪೊಲಿಟಿಷಿಯನ್ ನಾಗರಾಜ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾಗಿ ಸಾಥ್ ಕೊಟ್ಟಿದ್ದ ಹೇಮಂತ್ ರಾವ್ ಅಜ್ಞಾತವಾಸಿ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ಮಾಪಕರಾಗಿ ಹೆಜ್ಜೆ ಇಟ್ಟಿದ್ದಾರೆ. ಹೇಮಂತ್ ಅವರು ತಮ್ಮ ತಾಯಿ ನೆನಪಿನಲ್ಲಿ ದಾಕ್ಷಾಯಿಣಿ ಟಾಕೀಸ್ ಎಂಬ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಈ ನಿರ್ಮಾಣ ಸಂಸ್ಥೆಯ ಚೊಚ್ಚಲ‌ ಕಾಣಿಕೆಯೇ ಅಜ್ಞಾತವಾಸಿ. ದ್ರಾಕ್ಷಾಯಿಣಿ ಟಾಕೀಸ್ ನಡಿ ನಿರ್ಮಾಣವಾಗುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Trending News