ಅಜನೀಶ್ ಲೋಕನಾಥ್ ಕಿಡ್ನಾಪ್…!! ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

ಆದ್ರೆ ಈ ಫೋಟೋ ಅಸಲಿಯತ್ತು ಬೇರೆನೇ ಇದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರಮೋಷನ್ ಫೋಟೋ ಇದು. ಅಜನೀಶ್ ಲೋಕನಾಥ್ ಸ್ಯಾಂಡಲ್ ವುಡ್ ಅಂಗಳದಲ್ಲಿ ಬಹು ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಅದರ ಪ್ರಮೋಷನ್ ಗಾಗಿ ತೆಗೆದ ಫೋಟೋ ಇದಾಗಿದೆ.

Written by - Bhavishya Shetty | Last Updated : Nov 24, 2022, 02:31 PM IST
    • ಅಜನೀಶ್ ಲೋಕನಾಥ್ ರನ್ನು ಥಳಿಸಿ ಕೈ ಕಟ್ಟಿ ಗನ್ ಹಿಡಿದು ನಿಂತ ಉಗ್ರರ ಫೋಟೋ ವೈರಲ್
    • ಅಜನೀಶ್ ಲೋಕನಾಥ್ ಕಿಡ್ನ್ಯಾಪ್ ಆದ್ರಾ ಎಂಬ ಚರ್ಚೆ
    • ಇದು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರಮೋಷನ್ ಫೋಟೋ
ಅಜನೀಶ್ ಲೋಕನಾಥ್ ಕಿಡ್ನಾಪ್…!! ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ title=
Ajaneesh Loknath

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಜನೀಶ್ ಲೋಕನಾಥ್ ರನ್ನು ಥಳಿಸಿ, ಕೈ ಕಟ್ಟಿ ಗನ್ ಹಿಡಿದು ನಿಂತ ಉಗ್ರರ ಫೋಟೋ ವೈರಲ್ ಆಗಿದೆ. ಈ ಫೋಟೋ ನೋಡಿ ಅಜನೀಶ್ ಲೋಕನಾಥ್ ಕಿಡ್ನ್ಯಾಪ್ ಆದ್ರಾ ಅಂತಾ ಎಲ್ಲರೂ ಮಾತನಾಡೋಕೆ ಆರಂಭಿಸಿದ್ದಾರೆ.

ಆದ್ರೆ ಈ ಫೋಟೋ ಅಸಲಿಯತ್ತು ಬೇರೆನೇ ಇದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರಮೋಷನ್ ಫೋಟೋ ಇದು. ಅಜನೀಶ್ ಲೋಕನಾಥ್ ಸ್ಯಾಂಡಲ್ ವುಡ್ ಅಂಗಳದಲ್ಲಿ ಬಹು ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಅದರ ಪ್ರಮೋಷನ್ ಗಾಗಿ ತೆಗೆದ ಫೋಟೋ ಇದಾಗಿದೆ.

ಇದನ್ನೂ ಓದಿ: 31 ಗೋವುಗಳನ್ನು ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌..!

ವಿಭಿನ್ನ ಹಾಗೂ ವಿಶಿಷ್ಟ ರೀತಿಯ ಪ್ರಮೋಷನ್ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ'. ಸ್ಯಾಂಡಲ್ ವುಡ್ ಸ್ಟಾರ್ ತಾರೆಯರು ಈ ಚಿತ್ರಕ್ಕೆ ಸಾಥ್ ನೀಡುತ್ತಿದ್ದಾರೆ. ಇತ್ತೀಚೆಗೆ ಮೋಹಕ ತಾರೆ ರಮ್ಯಾ ಕೂಡ ಸಾಥ್ ನೀಡಿದ್ದು, ಇದರ ವಿಡಿಯೋ ಟೀಸರ್ ಸಖತ್ ವೈರಲ್ ಆಗಿ ಗಮನ ಸೆಳೆದಿತ್ತು.

ದಿವಂಗತ ನಟ ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್, ನಟಿ ರಮ್ಯಾ ಕೂಡ ಈ ಸಿನಿಮಾಗೆ ಸಾಥ್ ನೀಡಿದ್ದಾರೆ. ಚಿತ್ರದ ವಿಭಿನ್ನ ಪ್ರಮೋಷನ್ ಟೀಸರ್ ನಲ್ಲಿ ಅಭಿನಯಿಸಿದ್ದಾರೆ. ಆ ಸಾಲಿಗೆ ಅಜನೀಶ್ ಲೋಕನಾಥ್ ಸೇರ್ಪಡೆಯಾಗಿದ್ದು, ಈ ಚಿತ್ರದ ಸಂಗೀತ ನಿರ್ದೇಶನ ಕೂಡ ಇವರದ್ದೇ.

ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ. ಪಿ ಅವರ 'ಗುಲ್ ಮೋಹರ್ ಫಿಲಂಸ್' ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾವಿದು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಶೀರ್ವಾದದೊಂದಿಗೆ ಆರಂಭವಾದ ಈ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ʼಫ್ಲ್ಯಾಟ್ #9ʼರಲ್ಲಿ ನಡೆಯುವ ರಹಸ್ಯ ಚಿಚ್ಚಿಡುವ ಟ್ರೈಲರ್ ಡಿ.2ರಂದು ರಿಲೀಸ್..! 

ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಹಲವು ರಂಗಭೂಮಿ ಪ್ರತಿಭೆಗಳು ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News