ಬೆಂಗಳೂರು: ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಸರ್ವ ಸದಸ್ಯರ ಸಭೆಯನ್ನು ಇದೇ ಜೂನ್ 23 ರ ಭಾನುವಾರ ಬೆ.10ಕ್ಕೆ ಶಿವಾನಂದ ಸರ್ಕಲ್ ಬಳಿಯ ಗಾಂಧಿ ಭವನದ ಬಾಪೂ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಬೆ.9 ರಿಂದ ಉಪಾಹಾರದ ವ್ಯವಸ್ಥೆ ಇರುತ್ತದೆ. ಸಭೆಯ ಬಳಿಕ ಭೋಜನಕೂಟವಿರುತ್ತದೆ‌‌. ಈ ಬಾರಿಯ ಸಭೆಯಲ್ಲಿ ಹಲವು ಮಹತ್ತರ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.


COMMERCIAL BREAK
SCROLL TO CONTINUE READING

ಧೀಮಂತ ನಿರ್ದೇಶಕರಾದ ಶ್ರೀಯುತ ಪುಟ್ಟಣ್ಣ ಕಣಗಾಲ್ ಅವರು ಮತ್ತು ಹಿರಿಯ ನಿರ್ದೆಶಕರ ತಂಡ ಕಟ್ಟಿರುವ ಸಂಸ್ಥೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ. ಅದನ್ನು ಉಳಿಸಿ ಬೆಳೆಸುವಲ್ಲಿ ಅನೇಕ ನಿರ್ದೇಶಕರ ಮಹತ್ತರವಾದ ಪಾತ್ರ ಇದೆ.


ಇದನ್ನೂ ಓದಿ: ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು: ರಾಜ್ಯ ಸರ್ಕಾರದ ಮಹತ್ವದ ಸಭೆ


ಹಾಗೇಯೆ ನನ್ನ ತಂಡ ಅಧಿಕಾರಕ್ಕೆ ಬಂದ ಮೇಲೆ ನೆನೆಗುದಿಗೆ ಬಿದ್ದಿದ್ದ ಸಂಘದಲ್ಲಿ ಹೊಸ ಹೊಸ ಯೋಜನೆಯನ್ನು ರೂಪಿಸಿ ಸಂಘದ ಮತ್ತು ಸದಸ್ಯರ ಏಳಿಗೆಗಾಗಿ ದಿಟ್ಟವಾದ ನಿರ್ಧಾರಗಳನ್ನು ತೆಗೆದುಕೊಂಡು ಮುಂದುವರಿಯುತ್ತಿದ್ದೇವೆ. ನಿರ್ದೇಶಕನೇ ಸಾರ್ವಭೌಮ ಎನ್ನುವುದನ್ನು ನಿರೂಪಿಸುವತ್ತ ಹೊರಟಿದ್ದೇವೆ.


ಯಾವತ್ತಿಗೂ ನಮ್ಮ ಒಗ್ಗಟ್ಟನ್ನು ಮುರಿಯಲಾರೆವು ಎಂಬುದನ್ನು ಸಾಬೀತು ಪಡಿಸುತ್ತಿದ್ದೇವೆ.
ಈಗ ಅದೇ ಉದ್ದೇಶದಿಂದ ಬರುವ ಜೂನ್ 23ರ ಭಾನುವಾರ ಬೆಳಿಗ್ಗೆ ಹತ್ತು ಗಂಟೆಗೆ ಶಿವಾನಂದ ಸ್ಟೋರ್ ಬಳಿ ಇರುವ ಗಾಂಧೀಭವನದಲ್ಲಿ ಸರ್ವ ಸದಸ್ಯರ ಸಭೆ ಆಯೋಜಿಸಲಾಗಿದೆ. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಪ್ರತಿಯೊಬ್ಬ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ ಆರ್ ಕೆ ವಿಶ್ವನಾಥ್ ತಿಳಿಸಿದ್ದಾರೆ.


ಇದನ್ನೂ ಓದಿ: ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.