ನಾಳೆ ರಿಲೀಸ್ ಆಗಲಿರುವ ತೆಲುಗು ಚಿತ್ರ ಪುಷ್ಪ: ದಿ ರೈಸ್‌ (Pushpa: The Rise) ಪ್ರಚಾರದಲ್ಲಿ ನಿರತರಾಗಿರುವ ನಟ ಅಲ್ಲು ಅರ್ಜುನ್ (Allu Arjun), ಬುಧವಾರದ ಕಾರ್ಯಕ್ರಮಕ್ಕೆ ಎರಡು ಗಂಟೆ ತಡವಾಗಿ ಆಗಮಿಸಿದ್ದಕ್ಕಾಗಿ ಮಾಧ್ಯಮಗೋಷ್ಠಿಯಲ್ಲಿ ಕ್ಷಮೆಯಾಚಿಸಿದ್ದಾರೆ (Allu Arjun asks sorry). 


COMMERCIAL BREAK
SCROLL TO CONTINUE READING

ಮಾಧ್ಯಮ ಕಾರ್ಯಕ್ರಮದಲ್ಲಿ ಪತ್ರಕರ್ತರೊಬ್ಬರು ಮಾಧ್ಯಮಗೋಷ್ಠಿಯಲ್ಲಿ ಕಾಯುವಂತೆ ಮಾಡಿದ್ದಕ್ಕಾಗಿ ಅವರ ಬಳಿ ಪ್ರಶ್ನಿಸಿದರು. ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ ಆರಂಭವಾಗಬೇಕಿತ್ತು. ಆದರೆ, ಅಲ್ಲು ಅರ್ಜುನ್ ಎರಡು ಗಂಟೆ ತಡವಾಗಿ ಬಂದರು. ಮಂಜಿನಿಂದಾಗಿ ತನ್ನ ಚಾರ್ಟರ್ಡ್ ಫ್ಲೈಟ್ ಸರಿಯಾದ ಸಮಯಕ್ಕೆ ಹೊರಡಲು ಸಾಧ್ಯವಾಗಲಿಲ್ಲ ಎಂದು ಅಲ್ಲು ಹೇಳಿದರು.


"ಮೊದಲನೆಯದಾಗಿ, ನಾನು ಅತ್ಯಂತ ವಿಷಾದಿಸುತ್ತೇನೆ. ನಾವು ಖಾಸಗಿ ವಿಮಾನದಲ್ಲಿ ಬಂದಿದ್ದೇವೆ ಮತ್ತು ದಟ್ಟವಾದ ಮಂಜಿನಿಂದಾಗಿ ಅದು ಸಮಯಕ್ಕೆ ಟೇಕಾಫ್ ಆಗಲಿಲ್ಲ. ನಾನು ಯಾರನ್ನೂ ನೋಯಿಸಲು ಬಯಸುವುದಿಲ್ಲ. ಕಾರ್ಯಕ್ರಮದ ಸಮಯದ ಬಗ್ಗೆ ನನಗೆ ತಿಳಿದಿರಲಿಲ್ಲ. ಕ್ಷಮಿಸಿ, ಸರಿ!" ಎಂದು ಅಲ್ಲು ಅರ್ಜುನ್ ಹೇಳಿದರು.


 


ಎಲ್ಲರೆದುರು ರಣಬೀರ್ ಕಪೂರ್ ಕೇಳಿದ ಪ್ರಶ್ನೆಗೆ ನಾಚಿ ನೀರಾದ ಆಲಿಯಾ, ಇಲ್ಲಿದೆ ವಿಡಿಯೋ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.