ಭಜರಂಗಿ 2 ಖ್ಯಾತಿಯ ಚೆಲುವರಾಜು ಹಾಗೂ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಕಲಾವಿದೆಯಾಗಿ ಗುರುತಿಸಿಕೊಂಡಿರುವ ನಟಿ ವಿದ್ಯಾವಿಜಯ್ ಅಭಿನಯಿಸಿರುವ "ಮನಸು ಜಾರಿದೆ" ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಪ್ರಣಯ ರಾಜ ಶ್ರೀನಾಥ್ ಅವರಿಗೆ ಜೀವಮಾನ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Darshan: 'ಕುರುಕ್ಷೇತ್ರ' ಭೀಮ ಪಾತ್ರಧಾರಿ ಡ್ಯಾನಿಶ್ ಕಷ್ಟಕ್ಕೆ ನೆರವಾದ ʼಡಿ ಬಾಸ್‌ʼ & ರಾಕ್‌ಲೈನ್ ವೆಂಕಟೇಶ್...!


ಮಾಜಿ ಸಚಿವರಾದ ಕೃಷ್ಣಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಇಲ್ಲಿರುವವರೆಲ್ಲ ಬಹಳ ಚಿಕ್ಕವರು. ಈಗಿನ ಪೀಳಿಗೆಯವರು ನನಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ತುಂಬಾ ಖುಷಿಯಾಗಿದೆ ಎಂದರು ಪ್ರಣಯರಾಜ ಶ್ರೀನಾಥ್.


ಇದನ್ನೂ ಓದಿ: Radhika Pandit: ʼಸಿನಿಮಾಕ್ಕೆ ಮತ್ತೆ ಬನ್ನಿʼ ಎಂದು ರಾಧಿಕಾ ಪಂಡಿತ್‌ಗೆ ಡಿಮ್ಯಾಂಡೊ...ಡಿಮ್ಯಾಂಡ್..!


ವಿದ್ಯಾವಿಜಯ್ ಅವರು ಸಹ "ಮನಸು ಜಾರಿದೆ" ಆಲ್ಬಂ ಸಾಂಗ್ ಕುರಿತು ಹಾಗೂ VIDIS ಎಂಟರ್ಟೈನ್ಮೆಂಟ್ ಮೂಲಕ ಆಯೋಜಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ನಡೆದ ಈ ಸಮಾರಂಭದಲ್ಲಿ ಮಕ್ಕಳಿಗಾಗಿ  ದೇಸಿಶೈಲಿಯ "ದೇಸಿ ನಡಿಗೆ" ಎಂಬ ಫ್ಯಾಶನ್ ಶೋ ಕೂಡ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರಣಯರಾಜ ಶ್ರೀನಾಥ್ ಅವರಿಗೆ ಜೀವಮಾನ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಿ ಗೌರವ ಸಮರ್ಪಣೆ ಮಾಡಲಾಯಿತು. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.