ಬಾಲಿವುಡ್‍ನ ಬಿಗ್ ಆಫರ್‍ಗೆ ಬೇಡ ಅಂದರೇಕೆ ಬನಾರಸ್ ಹೀರೋ?

ನಟ ಝೈದ್ ಖಾನ್ ಕನ್ನಡ ಪ್ರೇಮ: ಝೈದ್ ಖಾನ್ ಅವರಿಗೆ ಬಾಲಿವುಡ್ಡಿನಿಂದ ಬಿಗ್ ಆಫರ್ ಒಂದು ಬಂದಿದೆ. ಹಿಂದಿಯ ಖ್ಯಾತ ನಿರ್ದೇಶಕರೋರ್ವರು ಒಂದೊಳ್ಳೆ ಕಥೆ ಹಿಡಿದು ಝೈದ್ ಖಾನ್ ಅವರನ್ನು ಸಂಪರ್ಕಿಸಿದ್ದಾರೆ. ಅದು ದೊಡ್ಡ ಬಜೆಟ್ಟಿನ ಚಿತ್ರ. ಪ್ರಸಿದ್ಧ ನಟಿಯೋರ್ವರು ಅದರಲ್ಲಿ ನಟಿಸಲಿದ್ದಾರಂತೆ. ಈ ಅವಕಾಶವನ್ನು ಝೈದ್ ಸೇರಿದಂತೆ ಯಾವ ನಾಯಕನೂ ನಿರಾಕರಿಸಲು ಸಾಧ್ಯವಿರಲಿಲ್ಲ.

Written by - YASHODHA POOJARI | Edited by - Yashaswini V | Last Updated : Nov 23, 2022, 10:59 AM IST
  • ಝೈದ್ ಖಾನ್ ಅವರಿಗೆ ಬಾಲಿವುಡ್ಡಿನಿಂದ ಬಿಗ್ ಆಫರ್
  • ಹಿಂದಿಯ ಖ್ಯಾತ ನಿರ್ದೇಶಕರೋರ್ವರು ಒಂದೊಳ್ಳೆ ಕಥೆ ಹಿಡಿದು ಝೈದ್ ಖಾನ್ ಅವರನ್ನು ಸಂಪರ್ಕಿಸಿದ್ದಾರೆ.
  • ಅದು ದೊಡ್ಡ ಬಜೆಟ್ಟಿನ ಚಿತ್ರ.
ಬಾಲಿವುಡ್‍ನ ಬಿಗ್ ಆಫರ್‍ಗೆ ಬೇಡ ಅಂದರೇಕೆ ಬನಾರಸ್ ಹೀರೋ? title=
Zaid Khan Kannada Prema

ನಟ ಝೈದ್ ಖಾನ್ ಕನ್ನಡ ಪ್ರೇಮ: ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝದ್‍ಗೆ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಝೈದ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಸೂಪರ್ ಸ್ಟಾರ್ ಆಗಿ ನೆಲೆ ಕಂಡುಕೊಳ್ಳುತ್ತಾರೆಂಬಂಥಾ ನಂಬಿಕೆಯೂ ಬಲಗೊಂಡಿದೆ.

ಇದೇ ಹೊತ್ತಿನಲ್ಲಿ ಝೈದ್ ಖಾನ್ ಅವರಿಗೆ ಬಾಲಿವುಡ್ಡಿನಿಂದ ಬಿಗ್ ಆಫರ್ ಒಂದು ಬಂದಿದೆ. ಹಿಂದಿಯ ಖ್ಯಾತ ನಿರ್ದೇಶಕರೋರ್ವರು ಒಂದೊಳ್ಳೆ ಕಥೆ ಹಿಡಿದು ಝೈದ್ ಖಾನ್ ಅವರನ್ನು ಸಂಪರ್ಕಿಸಿದ್ದಾರೆ. ಅದು ದೊಡ್ಡ ಬಜೆಟ್ಟಿನ ಚಿತ್ರ. ಪ್ರಸಿದ್ಧ ನಟಿಯೋರ್ವರು ಅದರಲ್ಲಿ ನಟಿಸಲಿದ್ದಾರಂತೆ. ಈ ಅವಕಾಶವನ್ನು ಝೈದ್ ಸೇರಿದಂತೆ ಯಾವ ನಾಯಕನೂ ನಿರಾಕರಿಸಲು ಸಾಧ್ಯವಿರಲಿಲ್ಲ. ಆದರೂ ಕೂಡಾ ಝೈದ್ ಅದನ್ನು ನಿರಾಕರಿಸಿದ್ದಾರೆ. ಅದಕ್ಕೆ ಕಾರಣವಾಗಿರೋದು ಅವರೊಳಗೆ ಹಾಸುಹೊಕ್ಕಾಗಿರುವ ಕನ್ನಡತನ!

ಇದನ್ನೂ ಓದಿ- ಶ್ರೀಕಾಳಹಸ್ತಿ ದೇವಾಲಯಕ್ಕೆ ಭೇಟಿ ಕೊಟ್ಟ ‘ರೆಮೋ’ ಸಿನಿಮಾ ನಾಯಕ ನಟ ಇಶಾನ್

ಝೈದ್ ಖಾನ್‍ರನ್ನು ಸಂಪರ್ಕಿಸಿದ್ದ ಆ ನಿರ್ದೇಶಕರು ವಿವರಿಸಿದ್ದ ಎಲ್ಲ ಕಥೆಗಳು ಕೂಡ ಝೈದ್‍ಗೆ ಇಷ್ಟವಾಗಿತ್ತು. ಆದರೆ ಆ ಚಿತ್ರ ಹಿಂದಿಯಲ್ಲಿ ಮಾತ್ರವೇ ತಯಾರಾಗುತ್ತದೆಂಬ ವಿಚಾರ ಮಾತ್ರ ಝೈದ್ ಅವರಿಗೆ ಹಿಡಿಸಿರಲಿಲ್ಲ. ಅವರು ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸುವಂತೆ ಕೇಳಿಕೊಂಡಿದ್ದರು. ಅದಕ್ಕೆ ಅತ್ತಲಿಂದ ಒಪ್ಪಿಗೆ ಬಂದಿರಲಿಲ್ಲ. ಆಗ ಝೈದ್ ಖಾನ್ "ನೀವು ನನ್ನನ್ನು ಅಪ್ರೋಚ್ ಮಾಡಲು ಕಾರಣವಾಗಿರೋದು ಬನಾರಸ್ ಚಿತ್ರ. ಅದು ಪ್ರಧಾನವಾಗಿ ತಯಾರಾಗಿರೋದು, ಗೆದ್ದಿರೋದು ಕನ್ನಡಿಗರಿಂದಲೇ. ನಾನು ಯಾವ ಕಾರಣಕ್ಕೂ ಕನ್ನಡ ಚಿತ್ರರಂಗವನ್ನು ಬಿಟ್ಟು ಹೋಗಲು ಸಿದ್ಧನಿಲ್ಲ" ಎಂಬಂಥಾ ನಿಖರ ಉತ್ತರ ನೀಡಿ ಆ ಬಿಗ್ ಆಫರ್ ಅನ್ನು ತಿರಸ್ಕರಿಸಿದ್ದಾರಂತೆ. 

ಇದನ್ನೂ ಓದಿ- Dharani Mandal Madhyadolage : 'ಧರಣಿ ಮಂಡಲ ಮಧ್ಯದೊಳಗೆ' ರಿಲೀಸ್‌ ಡೇಟ್‌ ಫಿಕ್ಸ್‌

ನಟ ಝೈದ್ ಖಾನ್ ಅವರ ಈ ಕನ್ನಡ ಪ್ರೇಮವನ್ನು, ಕನ್ನಡ ಚಿತ್ರರಂಗದ ಮೇಲೆ ಅವರಿಟ್ಟಿರುವ ಅಭಿಮಾನವನ್ನು ಮೆಚ್ಚಿಕೊಳ್ಳಲೇಬೇಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News