ಬೆಂಗಳೂರು : ಕ್ರೇಜಿಸ್ಟಾರ್​ ರವಿಚಂದ್ರನ್​ ಆವರಿಗೆ ಕನ್ನಡ ಚಿತ್ರರಂಗದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ ಎಂದು ವಿವಿಯ ಕುಲಪತಿ ಲಿಂಗರಾಜ್ ಗಾಂಧಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಮಾಹಿತಿ ನೀಡಿರುವ ವಿಶ್ವವಿದ್ಯಾನಿಲಯದ ಕುಲಪತಿ ಲಿಂಗರಾಜ್ ಗಾಂಧಿ, ಬೆಂಗಳೂರು ನಗರ ವಿವಿಯ ಪ್ರಥಮ ವಾರ್ಷಿಕ ಘಟಿಕೋತ್ಸವದಲ್ಲಿ ವಿ. ರವಿಚಂದ್ರನ್ ಸೇರಿ ಮೂವರು ಸಾಧಕರಿಗೆ  ಡಾಕ್ಟರೇಟ್ ಗೌರವ ಪ್ರಧಾನ ಮಾಡಲಾಗುತ್ತಿದೆ. ಇದೇ ತಿಂಗಳ 11ರಂದು ಪ್ರಥಮ‌ ಘಟಿಕೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಘಟಿಕೋತ್ಸವದ ಕಾರ್ಯಕ್ರಮವನ್ನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಆಡಿಟೋರಿಯಂ ನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.


ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ


1. ವಿ. ರವಿಚಂದ್ರನ್ (ಸಿನಿಮಾ ಕ್ಷೇತ್ರದಲ್ಲಿ ಸಾಧನೆ) 


 2. ಎಂ ಆರ್ ಜೈಶಂಕರ್ (ಸಮಾಜ ಸೇವೆಗೆ)


3. ಡಾ. ಸತ್ಯನಾರಾಯಣ (ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ)


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.