ಮದುವೆ ಮುನ್ನವೇ ಭಾವಿ ಪತ್ನಿಯನ್ನ ಪ್ರೋಡ್ಯೂಸರ್ ಮಾಡಿದ ಭುವನ್ ಪೊನ್ನಣ್ಣ 

ನಟಿ ಹರ್ಷಿಕಾ ಹಾಗೂ ಭುವನ್ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ವಿಚಾರ ಎಲ್ಲರಿಗೂ  ಎಲ್ಲರಿಗೂ ಗೊತ್ತಿರುವ ವಿಚಾರ ಇದೇ ಮದುವೆ ಶುಭ ಸುಖ ನೀಡುವ ಜೊತೆಗಳು ಜೊತೆಗೆ ನಟ ಭುವನ್ ಹಾಗೂ ಹರ್ಷಿಕಾ ಪೂಣಚ್ಚ ತಮ್ಮ ಸ್ವಂತ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ...ಅದರ ಜೊತೆಗೆ ಹೊಸ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ...

Written by - Manjunath N | Last Updated : Aug 17, 2023, 10:24 PM IST
  • ಹೊಸ ಪ್ರೊಡಕ್ಷನ್ ಹೌಸ್ ಶುರು ಮಾಡಿದ ಭುವನ್ ಹರ್ಷಿಕಾ
  • ಹರ್ಷಿಕಾ ನಿರ್ಮಾಣದ ಭುವನ್ ನಿರ್ದೇಶಿಸಿ ನಟಿಸ್ತಿರೋ ಸಿನಿಮಾ ಇದೇ ನೋಡಿ
ಮದುವೆ ಮುನ್ನವೇ ಭಾವಿ ಪತ್ನಿಯನ್ನ ಪ್ರೋಡ್ಯೂಸರ್ ಮಾಡಿದ ಭುವನ್ ಪೊನ್ನಣ್ಣ  title=

ಬೆಂಗಳೂರು: ನಟಿ ಹರ್ಷಿಕಾ ಹಾಗೂ ಭುವನ್ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ವಿಚಾರ ಎಲ್ಲರಿಗೂ  ಎಲ್ಲರಿಗೂ ಗೊತ್ತಿರುವ ವಿಚಾರ ಇದೇ ಮದುವೆ ಶುಭ ಸುಖ ನೀಡುವ ಜೊತೆಗಳು ಜೊತೆಗೆ ನಟ ಭುವನ್ ಹಾಗೂ ಹರ್ಷಿಕಾ ಪೂಣಚ್ಚ ತಮ್ಮ ಸ್ವಂತ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ...ಅದರ ಜೊತೆಗೆ ಹೊಸ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ...

ಭುವನ್ ಹಾಗೂ ಹರ್ಷಿಕಾ ಅವರ ಪ್ರೋಡಕ್ಷನ್ ಹೌಸ್ ಗೆ ಭುವನಂ ಎಂಟಟೈನ್ ಮೆಂಟ್ ಎಂದು ಹೆಸರಿಡಲಾಗಿದ್ದು ಅದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ "ಭುವನಂ ಶ್ರೇಷ್ಠಮ್  ಗಚ್ಚಾಮಿ"  ಎಂದು ಹೆಸರಿಡಲಾಗಿದೆ...

ಇದನ್ನೂ ಓದಿ : ಮಾರುಕಟ್ಟೆಯಲ್ಲಿ ಹರಿದಾಡುತ್ತಿದೆ 2 ವಿಧದ 500 ರೂ. ನೋಟುಗಳು: ಆರ್ ಬಿಐ ನೀಡಿದೆ ಮಹತ್ವದ ಅಪ್ ಡೇಟ್

ಇದೊಂದು ಬಾಕ್ಸರ್ ನ ಕಥೆಯಾಗಿದ್ದು ಆರು ವರ್ಷದ ಹಿಂದೆಗೆ ಈ ರೀತಿಯ ಸಿನಿಮಾ ಒಂದನ್ನ ಮಾಡಬೇಕು ಎಂದು ಭುವನ್ ಹಾಗೂ ಹರ್ಷಿಕಾ ಪ್ಲಾನ್ ಮಾಡಿಕೊಂಡಿದ್ದರಂತೆ. ಬಾಕ್ಸರ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ  ಭುವನ್​ ಪೊನ್ನಣ್ಣ ಸಾಕಷ್ಟು ತರಬೇತಿ ಪಡೆದುಕೊಂಡಿದ್ದಾರೆ. ಈ ಪಾತ್ರಕ್ಕೆ ಹಲವು ಶೇಡ್​ ಇರಲಿದೆ... ಈ ಚಿತ್ರದಲ್ಲಿ  ರೆಟ್ರೊ ಶೈಲಿಯಲ್ಲೂ ಭುವನ್ ಅವರನ್ನು ನೋಡಬಹುದು. ಸಿನಿಮಾಗಳ ಸಂಖ್ಯೆಗಿಂತಲೂ ಗುಣಮಟ್ಟ ಮುಖ್ಯ ಎನ್ನುವ ಭುವನ್ ಗಡಿಬಿಡಿಯಲ್ಲಿ ಬೇರೆ ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ಕಳೆದ ಎರಡು ವರ್ಷಗಳಿಂದ ಈ ಸಿನಿಮಾದ ಸ್ಕ್ರಿಪ್ಟ್​ ಮೇಲೆ  ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ : Savings Account: ನಿಮ್ಮ ಬಳಿಯೂ ಒಂದಕ್ಕಿಂತ ಹೆಚ್ಚು ಉಳಿತಾಯ ಖಾತೆ ಇದೆಯೇ? ಈ 4 ವಿಷಯಗಳನ್ನು ನಿರ್ಲಕ್ಷಿಸಬೇಡಿ

ಸದ್ಯ ಮದುವೆಯ ಸಂದರ್ಭದಲ್ಲಿ ಈ ಖುಷಿಯ ಸುದ್ದಿಯನ್ನು ಕೂಡ ಭುವನ್ ಹಾಗೂ ಹರ್ಷಿಕಾ ಮಾಧ್ಯಮ ಮಿತ್ರರ ಜೊತೆ ಹಂಚಿಕೊಂಡಿದ್ದಾರೆ... ಮದುವೆ ಸಮಾರಂಭ ಎಲ್ಲವನ್ನು ಮುಗಿಸಿಕೊಂಡು ಶೀಘ್ರದಲ್ಲಿ ಸಿನಿಮಾ ಚಿತ್ರೀಕರಣವನ್ನು ಶುರು ಮಾಡಲಿದ್ದಾರೆ.. ಇನ್ನು ಈ ಸಿನಿಮಾಗೆ ಭುವನ್ ಅವರೇ ಕಥೆ ಬರೆದು ನಿರ್ದೇಶನವನ್ನು ಮಾಡುತ್ತಿದ್ದಾರೆ ಚಿತ್ರದಲ್ಲಿ ಭುವನವರೇ ನಾಯಕನಾಗಿ ಕಾಣಿಸಿಕೊಳ್ಳಲಿದ್ದು ಹರ್ಷಿಕಾ ನಿರ್ಮಾಪಕಿಯಾಗಿ ಮೊದಲ‌ ಬಾರಿಗೆ ಜವಾಬ್ದಾರಿ ನಿರ್ವಹಿಸಲಿದ್ದಾರೆ .

ಚಿತ್ರಕ್ಕೆ ನಾಯಕಿಯಾಗಿ ಕೊಡಗು ಮೂಲದ ಹೊಸ ಪ್ರತಿಭೆಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಭುವನ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ..

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News