Varthur Santhosh : ಪರಪ್ಪನ ಅಗ್ರಹಾರಕ್ಕೆ ಬಿಗ್‌ಬಾಸ್‌ ಸ್ಪರ್ಧಿ ಶಿಫ್ಟ್‌.! ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ

Varthur Santhosh : ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾನೆ. ಸಂತೋಷ್‌ ಕುತ್ತಿಗೆಯಲ್ಲಿ ಹುಲಿ ಉಗುರು ಇರುವ ಪೆಂಡೆಂಟ್‌ ಲಾಕೆಟ್‌ ಧರಿಸಿರುವುದನ್ನು ಖಾಸಗಿ ವಾಹಿನಿಯಲ್ಲಿ ವ್ಯಕ್ತಿಯೊಬ್ಬರು ಗಮನಿಸಿದ್ದರು.

Written by - VISHWANATH HARIHARA | Edited by - Krishna N K | Last Updated : Oct 23, 2023, 06:29 PM IST
  • ಹುಲಿ ಉಗುರಿನ ಲಾಕೆಟ್‌ ಧರಿಸಿದ್ದ ಹಳ್ಳಿಕಾರ್‌ ಸಂತೋಷ್‌ ಲಾಕ್‌
  • ಬಿಗ್‌ ಬಾಸ್‌ ಮನೆಯಲ್ಲಿದ್ದಾಗಲೇ ಅರೆಸ್ಟ್‌ ಮಾಡಿದ್ರು ಅಧಿಕಾರಿಗಳು
  • ಬಿಗ್‌ಬಾಸ್‌ ಸ್ಪರ್ಧಿ ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ
Varthur Santhosh : ಪರಪ್ಪನ ಅಗ್ರಹಾರಕ್ಕೆ ಬಿಗ್‌ಬಾಸ್‌ ಸ್ಪರ್ಧಿ ಶಿಫ್ಟ್‌.! ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ title=
Varthur Santhosh

Bigg Boss Kannada 10 Contestant Arrest : ಹಳ್ಳಿಕಾರ್‌ ತಳಿಯ ಹಸುಗಳನ್ನು ಸಾಕುವ ಮೂಲಕ ದೊಡ್ಡ ಸೌಂಡ್‌ ಮಾಡಿ ಸದ್ಯ ಬಿಗ್‌ ಬಾಸ್‌ ಮನೆ ಎಂಟ್ರಿ ಕೊಟ್ಟಿರುವ ಹಳ್ಳಿಕಾರ್‌ ಸಂತೋಷ್‌ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರುವಂತಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್‌ ಆಗಿದ್ದಾರೆ.. ಈ ಬಗ್ಗೆ ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ..‌  

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾನೆ. ಆಗಿದ್ದಿಷ್ಟು, ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿರುವ ಸಂತೋಷ್‌ ಕುತ್ತಿಗೆಯಲ್ಲಿ ಹುಲಿ ಉಗುರು ಇರುವ ಪೆಂಡೆಂಟ್‌ ಲಾಕೆಟ್‌ ಧರಿಸಿರುವುದನ್ನು ಖಾಸಗಿ ವಾಹಿನಿಯಲ್ಲಿ ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. 

ಇದನ್ನೂ ಓದಿ: ಬ್ಲೌಸ್ ಇಲ್ಲದೆ ಮೈಸೂರ್ ಸಿಲ್ಕ್ ಸೀರೆ ಉಟ್ಟ ನಿಹಾರಿಕಾ! ‘ಮೆಗಾ’ ಕುಡಿಯ ಮೈಮಾಟಕ್ಕೆ ಫ್ಯಾನ್ಸ್ ಫಿದಾ

ಈ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ ಡಿಸಿ ಸಹ ಅಧಿಕಾರಿಗಳಿಗೆ ಸಂತೋಷ್‌ ಬಂಧಿಸಿ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ. ಹೀಗಾಗಿ ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಜಾಮೀನು ರಹಿತ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಿ ಸಂತೋಷ್‌ನನ್ನು ಬಿಗ್‌ಬಾಸ್‌ ಮನೆಯಲ್ಲಿದ್ದಾಗಲೇ ಬಂಧಿಸಲಾಗಿದೆ. 

ನಂತರ ಕಗ್ಗಲಿಪುರ ಅರಣ್ಯ ಇಲಾಖೆ ಕಚೇರಿಗೆ ಕರೆ ತಂದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸಂತೋಷ್ ಸಹ ಅಧಿಕಾರಿಗಳ ಮುಂದೆ ತಪ್ಪು ಒಪ್ಪಿಕೊಂಡಿದ್ದಾರೆ. ಮೂರು ವರ್ಷದ ಹಿಂದೆ ಹೊಸೂರಿನ ವ್ಯಕ್ತಿಯೊಬ್ಬರಿಂದ ಹುಲಿ ಉಗುರು ಖರೀದಿಸಿದ್ದೆ. ಹುಲಿ ಉಗುರು ಧರಿಸುವುದು ಅಪರಾಧ ಎಂದು ತಿಳಿದಿರಲಿಲ್ಲ ಎಂದಿದ್ದಾರೆ. ನಂತರ ಸಂತೋಷ್ ಹೇಳಿಕೆ ದಾಖಲಿಸಿಕೊಂಡಿರುವ ಅಧಿಕಾರಿಗಳು ಇದು ಹುಲಿ ಉಗುರು ಹೌದೋ, ಅಲ್ಲವೋ ಅಥವಾ ಬೇರೆ ಪ್ರಾಣಿಯ ಉಗುರೋ ಎಂಬ ಬಗ್ಗೆ ತಿಳಿಯಲು ಎಫ್.ಎಸ್.ಎಲ್ ಗೆ ಉಗುರನ್ನು ರವಾನಿಸಿದ್ದಾರೆ. 

ಇದನ್ನೂ ಓದಿ: ನಟ ಸೂರ್ಯನ ಪತ್ನಿ ಜ್ಯೋತಿಕಾ ಬಳಿ ಇರುವ ಆಸ್ತಿ ಮೌಲ್ಯ ಎಷ್ಟು ಗೊತ್ತೆ..?

ಇನ್ನೂ ಹಬ್ಬದ ಪ್ರಯುಕ್ತ ಕೋರ್ಟ್‌ ರಜೆ ಹಿನ್ನೆಲೆ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ಜಡ್ಜ್‌ ನಿವಾಸಕ್ಕೆ ಕರೆದೊಯ್ದು ಸಂತೋಷ್‌ರನ್ನು ಹಾಜರು ಪಡಿಸಲಾಯ್ತು.  ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಪ್ರಕರಣದ ಗಂಭೀರತೆ ಅರಿತು ಸಂತೋಷ್‌ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ. 

ಸದ್ಯ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವರ್ತೂರು ಸಂತೋಷ್‌ನನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗಿದೆ. ಅದೆನೇ ಇರ್ಲಿ, ಹಳ್ಳಿಕಾರ್‌ ತಳಿಯ ಜಾನುವಾರು ಸಾಕಾಣಿಕೆ ಮಾಡಿ ಸಾಕಷ್ಟು ಪ್ರಸಿದ್ದಿ ಪಡೆದಿದ್ದ ಸಂತೋಷ್‌ಗೆ ಹುಲಿ ಉಗುರಿನ ಲಾಕೆಟ್‌ ಧರಿಸಬಾರದು ಎಂಬ ಅರಿವು ಇರಲಿಲ್ವ ಎಂಬ ಪ್ರಶ್ನೆ ಕಾಡುತ್ತಿದೆ. ಮುಂದೆ ಅಧಿಕಾರಿಗಳ ತನಿಖೆಯಲ್ಲಿ ಹುಲಿ ಉಗುರಿನ ಅಸಲಿ ಸತ್ಯ ಬಯಲಾಗಲಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News