Adipurush: ಆದಿಪುರುಷ ಗಲ್ಲಾಪೆಟ್ಟಿಗೆಯಲ್ಲಿ ಹೀನಾಯವಾಗಿ ಸೋತಿದ್ದು, ಇದು ಓಂ ರಾವತ್ ಅವರ ವೈಫಲ್ಯವೇ ಹೊರತು ಪ್ರಭಾಸ್ ಅವರದ್ದಲ್ಲ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಕೆಟ್ಟ ವಿಎಫ್‌ಎಕ್ಸ್‌ನ ಬಗ್ಗೆ ನಿರಾಶೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ರಾವಣನ ಪಾತ್ರ, ಅಗೌರವದ ಡೈಲಾಗ್‌ಗಳವರೆಗೆ ಚಿತ್ರವು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಸೋಮವಾರದಂದು ಬಾಕ್ಸ್‌ ಆಫೀಸ್‌ನಲ್ಲಿ ಮುಗ್ಗರಿಸಿದೆ. 


COMMERCIAL BREAK
SCROLL TO CONTINUE READING

ರಾಮಾಯಣವನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಓಂ ರಾವತ್ ಅವರನ್ನು ಜನರು ಕಟುವಾಗಿ ಟೀಕಿಸುತ್ತಿದ್ದಾರೆ. ಅವರು ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಅಸಮಾಧಾನ ಹೊರಹಾಕುತ್ತಿದ್ದಾರೆ. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಕ್ರ್ಯಾಶ್ ಆಗುತ್ತದೆಯಂತೆ ಎಂಬ ಸುದ್ದಿ ಜೋರಾಗಿ ಹಬ್ಬುತ್ತಿದೆ. ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಆರ್.ಖಾನ್ ಅವರು ಆದಿಪುರುಷ ಚಿತ್ರದಲ್ಲಿ ರಾಘವ್ ಪಾತ್ರಕ್ಕಾಗಿ ಮೊದಲು ಪ್ರಭಾಸ್ ಅವರನ್ನಲ್ಲ ಕಾರ್ತಿಕ್ ಆರ್ಯನ್ ಅವರನ್ನು ಸಂಪರ್ಕಿಸಿದ್ದರು ಎಂದು ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ. 


ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ.. ಖ್ಯಾತ ಧಾರಾವಾಹಿ ನಿರ್ಮಾಪಕನ ವಿರುದ್ಧ FIR


ಕಮಾಲ್ ಆರ್.ಖಾನ್ ಅವರು ತನ್ನ ಇತ್ತೀಚಿನ ಟ್ವೀಟ್‌ನಲ್ಲಿ, ಆದಿಪುರುಷ ಮಾಡದಿದ್ದಕ್ಕಾಗಿ ಸತ್ಯ ಪ್ರೇಮ್ ಕಿ ಕಥಾ ನಟನನ್ನು ಅದೃಷ್ಟಶಾಲಿ ಎಂದು ಕರೆದಿದ್ದಾರೆ. ತನ್ಹಾಜಿ ಚಿತ್ರದ ನನ್ನ ವಿಮರ್ಶೆಯಲ್ಲಿ ನಾನು ಓಂ ರಾವುತ್‌ಗೆ ನಿರ್ದೇಶನ ತಿಳಿದಿಲ್ಲ ಎಂದು ಹೇಳಿದ್ದೇನೆ. ನಾನು 100% ಸರಿ ಎಂದು ಆದಿಪುರುಷನೊಂದಿಗೆ ಸಾಬೀತಾಗಿದೆ. ನಾನು ಯಾವುದೇ ಚಲನಚಿತ್ರ ಅಥವಾ ಯಾವುದೇ ನಿರ್ದೇಶಕ ಅಥವಾ ನಟನಿಗೆ ಎಂದಿಗೂ ಸುಳ್ಳು ಹೇಳುವುದಿಲ್ಲ. ಕಾರ್ತಿಕ್‌ ಆರ್ಯನ್ ಅವರು ಅದೃಷ್ಟವಂತರು‌ ಆದಿಪುರುಷ ಮಾಡಲಿಲ್ಲ!" ಎಂದು ಬರೆದಿದ್ದಾರೆ. 


 


Adipurush: "600 ಕೋಟಿ ವ್ಯರ್ಥ, ನನಗೆ ಸಹಿಸಲಾಗಲಿಲ್ಲ.." ಆದಿಪುರುಷ ನೋಡಿ ಕೋಪಗೊಂಡ ನಟ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.