ಕನ್ನಡ ಚಿತ್ರರಂಗಕ್ಕೆ ಒಬ್ಬರೇ ಯಜಮಾನ, ಅದು ವಿಷ್ಣುದಾದ ಮಾತ್ರ: ದರ್ಶನ್

ನನ್ನ ಯಜಮಾನ ಸಿನಿಮಾಗೂ ವಿಷ್ಣುದಾದ ಅವರಿಗೂ ಸಂಬಂಧ ಇಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

Last Updated : Feb 20, 2019, 02:02 PM IST
ಕನ್ನಡ ಚಿತ್ರರಂಗಕ್ಕೆ ಒಬ್ಬರೇ ಯಜಮಾನ, ಅದು ವಿಷ್ಣುದಾದ ಮಾತ್ರ: ದರ್ಶನ್ title=

ಬೆಂಗಳೂರು: ಕನ್ನಡ ಚಿತ್ರರಂಗದ ಯಜಮಾನ ಸಾಹಸ ಸಿಂಹ ವಿಷ್ಣುವರ್ಧನ್ ಮಾತರ್ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. 

ಯಜಮಾನ ಚಿತ್ರದ ಶೀರ್ಷಿಕೆ ಬಗ್ಗೆ ಇದ್ದ ಸಾಕಷ್ಟು ಗೊಂದಲಗಳಿಗೆ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ನಟ ದರ್ಶನ್, 'ನನ್ನ ಯಜಮಾನ ಸಿನಿಮಾಗೂ ವಿಷ್ಣುದಾದ ಅವರಿಗೂ ಸಂಬಂಧ ಇಲ್ಲ. ಸುಮ್ಮನೇ ಸಿನಿಮಾದ ಬಗ್ಗೆ ಗೊಂದಲ ಮೂಡಿಸುವುದು ಬೇಡ. ಸಿನಿಮಾ ರಂಗದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ. ಅದ್ದರಿಂದ ಮತ್ತೊಮ್ಮೆ ಹೇಳುತ್ತಿದ್ದೇವೆ. ಇಂಡಸ್ಟ್ರಿಗೆ ಒಬ್ಬರೇ 'ಯಜಮಾನ', ಅದು ವಿಷ್ಣುದಾದ ಮಾತ್ರ ಎಂದು ಹೇಳಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು, ರವಿಶಂಕರ್, ಡಾಲಿ ಧನಂಜಯ್, ಅನೂಪ್ ಠಾಕೂರ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಚಿತ್ರವನ್ನು ಶೈಲಜಾ ನಾಗ್ ಹಾಗೂ ಬಿ ಸುರೇಶ್ ಅವರ ಹೊಸ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದು, ವಿ.ಹರಿಕ್ರುಶನ್ ನಿರ್ದೇಶಿಸಿದ್ದಾರೆ.  ಸದ್ಯ ಮಾರ್ಚ್ 1ರಂದು ಚಿತ್ರ ದೇಶಾದ್ಯಂತ ತೆರೆ ಕಾಣಲಿದೆ ಎನ್ನಲಾಗಿದೆ.
 

Trending News